Thursday, January 29, 2026

’ಸುಳ್ಳು, ಮೋಸಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ’- ಅರುಣ್‌ಕುಮಾರ್ ಪುತ್ತಿಲ

ವಿಟ್ಲ: ನಿರಂತರ ಜನರಲ್ಲಿ ಸುಳ್ಳು ಹೇಳಿಕೊಂಡು ಮೋಸ ಮಾಡುತ್ತಿದ್ದ ಕಾಂಗ್ರೆಸ್ ಈ ಬಾರಿಯ ಲೋಕಸಭೆಯ ಚುನಾವಣೆಯ ಬಳಿಕ ಹೇಳಹೆಸರಿಲ್ಲದಂತಾಗಿದೆ. ಇನ್ನು ಕನಿಷ್ಠ 25 ವರ್ಷಗಳ ಕಾಲ ಕೇಂದ್ರದಲ್ಲಿ ಎನ್‌ಡಿಎ ಆಡಳಿತಕ್ಕೆ ಯಾವುದೇ ಆತಂಕವಿಲ್ಲ ಎಂದು ಹಿಂದೂ ಧಾರ್ಮಿಕ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದರು.
ಅವರು ಗುರುವಾರ ರಾತ್ರಿ ಪುಣಚ ಪರಿಯಾಲ್ತಡ್ಕ ಜಂಕ್ಷನ್‌ನಲ್ಲಿ ನಡೆದ ಕಾರ್‍ಯಕರ್ತರಿಗೆ ಅಭಿನಂದನೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಜಗತ್ತಿನ ಪ್ರಭಾವಿ ರಾಷ್ಟ್ರಗಳೇ ಹುಬ್ಬೇರಿಸುವಂತೆ ಮಾಡಿದ ನರೇಂದ್ರ ಮೋದಿಯನ್ನು ಇಲ್ಲಸಲ್ಲದ ಕೀಳು ಮಟ್ಟದ ನಿಂದನೆ, ಟೀಕೆ ಮಾಡಿದ ಕಾಂಗ್ರೆಸ್, ಹಾಗೂ ದೇಶದ ನಾನಾ ರಾಷ್ಟ್ರೀಯ ಮತ್ತು ನಾನಾ ಪ್ರಾದೇಶಿಕ ಪಕ್ಷಗಳಿಗೆ ಮೋದಿ ಟೀಕೆಯ ಪರಿಣಾಮವನ್ನು ಜನರೇ ತಿಳಿಸಿಕೊಟ್ಟಿದ್ದಾರೆ. ಕೊಳ್ನಾಡು ಜಿಲ್ಲಾ ಪಂಚಾಯಿತಿ ಸದಸ್ಯ ಚುನಾವಣೆಯ ಪೂರ್ವದಲ್ಲಿ ಬಿಗಿದ ಕೀಳು ರಾಜಕೀಯ ಭಾಷಣ ಬಿಜೆಪಿಯ ಗೆಲುವಿಗೆ ಯಾವುದೇ ರೀತಿಯಲ್ಲಿ ಅಡ್ಡಿಯಾಗಿಲ್ಲ ಎಂದು ತಿಳಿಸಿದ ಅವರು ಇನ್ನು ೫ ವರ್ಷಗಳಲ್ಲಿ ಜಗತ್ತೇ ಅಚ್ಚರಿಯಿಂದ ನೋಡುವ ರೀತಿಯಲ್ಲಿ ದೇಶದ ಚಿತ್ರಣ ಬದಲಾವಣೆಯಾಗಲಿದೆ ಎಂದರು.
ಹಿಂದೂ ಮುಖಂಡರಾದ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಬಜರಂಗ ದಳದ ಮುಖಂಡ ಮುರಳೀಕೃಷ್ಣ ಹಸಂತಡ್ಕ, ಬಿಜೆಪಿ ತಾಲೂಕು ಮಂಡಲದ ಕಾರ್‍ಯದರ್ಶಿ ರಾಮಕೃಷ್ಣ ಮೂಡಂಬೈಲು ಮಾತನಾಡಿದರು.
ಪುಣಚ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಎಂ. ದಲ್ಕಜೆಗುತ್ತು ಸ್ವಾಗತಿಸಿದರು. ಕಾರ್‍ಯದರ್ಶಿ ಪ್ರವೀಣ್ ಕುಮಾರ್ ಬೊಳ್ಳರಡ್ಕ ವಂದಿಸಿದರು. ಜಗದೀಶ್ ಮಾರಮಜಲು ಕಾರ್‍ಯಕ್ರಮ ನಿರೂಪಿಸಿದರು.

 

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...