Sunday, July 13, 2025

ಪುಣಚ: ಶ್ರೀದೇವಿ ವಿದ್ಯಾಕೇಂದ್ರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ, ಸ್ಮಾರ್ಟ್‌ಕ್ಲಾಸ್, ವೆಬ್‌ಸೈಟ್ ಅನಾವರಣ

ವಿಟ್ಲ:  ಶ್ರೀದೇವಿ ವಿದ್ಯಾಕೇಂದ್ರದಲ್ಲಿ ಹೊಸ ಮಕ್ಕಳಿಗೆ ಸ್ವಾಗತ ಕಾರ್‍ಯಕ್ರಮವನ್ನು ಹಬ್ಬದ ರೀತಿ ಆಚರಿಸಲಾಯಿತು. ಶಾಲೆಗೆ ಹೊಸತಾಗಿ ಸೇರ್ಪಡೆಯಾದ ಮಕ್ಕಳನ್ನು ಶಿಕ್ಷಕಿಯರು ಆರತಿ ಬೆಳಗಿ ಸ್ವಾಗತಿಸಿದರು. ಮಕ್ಕಳು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ತಂದೆ-ತಾಯಿಯ ಆಶೀರ್ವಾದ ಪಡೆದರು.
ಜ್ಯೋತಿ ಬೆಳಗಿಸಿ ಕಾರ್‍ಯಕ್ರಮ ಉದ್ಘಾಟಿಸಿದ ಗುರುವಾಯನಕೆರೆಯ ಉದ್ಯಮಿ ಬಾಲಕೃಷ್ಣ ಸಿ ನಾಯಕ್ ಮಾತನಾಡಿ ಶಾಲೆಯಲ್ಲಿ ಕಲಿತ ಶಾಲೆಯ ನೆನಪು ಶಾಶ್ವತ, ಕಷ್ಟದಿಂದ ಮೇಲೆ ಬಂದಾಗಲೇ ಜೀವನದ ನಿಜ ಅನುಭವವಾಗುವುದು ಎಂದರು.
ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀರಾಮಚಂದ್ರ ಭಟ್ ವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ, ಪ್ರಗತಿಪರ ಕೃಷಿಕ ರಾಜಗೋಪಾಲ ಭಟ್ ಉಬರು ಶಾಲೆಗೆ ಸ್ಮಾರ್ಟ್‌ಕ್ಲಾಸಿನ ಕೊಡುಗೆ ನೀಡಿ ಉದ್ಘಾಟಿಸಿದರು. ಇನ್ನೋರ್ವ ಹಿರಿಯ ವಿದ್ಯಾರ್ಥಿ ಹರೀಶ್ ಆಜೇರು ಬಯೋಕಾನ್ ಬೆಂಗಳೂರು ಹುಟ್ಟುಹಾಕಿದ ’ಶಾಲಾ ಜಾಲತಾಣ’ ವನ್ನು ಅನಾವರಣಗೊಳಿಸಿದರು .
ಈ ಸಂದರ್ಭ 2018-19ನೇ ಸಾಲಿನ ಎಸ್‌ಎಸ್‌ಎಲ್‌ಸಿ. ಪರೀಕ್ಷೆಯಲ್ಲಿ 94% ಫಲಿತಾಂಶ ತಂದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಪ್ರೌಢ ಶಾಲಾ ಮುಖ್ಯಶಿಕ್ಷಕಿ ಗಂಗಮ್ಮ ಅಭಿನಂದಿಸಿದರು. ಶಾಲಾ ಸಂಚಾಲಕರಾದ ನೀರ್ಕಜೆ ಜಯಶ್ಯಾಂ ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಲೋಕೇಶ್ ವಂದಿಸಿದರು. ನಂತರ ಶಿಕ್ಷಕ ರಕ್ಷಕ ಸಭೆ ನಡೆಯಿತು. ಸಹ ಶಿಕ್ಷಕಿಯರಾದ ರಜನಿ, ಶ್ವೇತಾ, ಸವಿತಾ ಕಾರ್‍ಯಕ್ರಮ ನಿರೂಪಿಸಿದರು.

More from the blog

ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ..

ಪೊಳಲಿ: ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮಿಜಿಯವರು...

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತರಾದ ಪೊಳಲಿ...

ನೆಟ್ಲಮುಡ್ನೂರು : ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಜನಜಾಗೃತಿ ಅಭಿಯಾನ..

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ "ಜನಜಾಗೃತಿ ಅಭಿಯಾನ" ನೇರಳಕಟ್ಟೆಯಲ್ಲಿ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಚಿವ...

ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದೆ – ಭರತ್ ಮುಂಡೋಡಿ..

ಬಂಟ್ವಾಳ: ಬಡವರ ಉದ್ಧಾರ, ಮಹಿಳಾ ಸ್ವಾವಲಂಬನೆಯ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದ.ಕ.ಜಿಲ್ಲೆಯಲ್ಲಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ...