Thursday, February 13, 2025

ಪುಣಚ: ಆಜೇರು ರಸ್ತೆಗೆ ಡಾಂಬರೀಕರಣ ಆಗ್ರಹಿಸಿ ಜೂ. 10 ರಂದು ಪ್ರತಿಭಟನೆ

ವಿಟ್ಲ: ಪುಣಚ ಗ್ರಾಮದ ಆಜೇರು ಮಲ್ಯ ಅನಾವುಗುಡ್ಡೆಯ ರಸ್ತೆಗೆ ಡಾಂಬರೀಕರಣ ಮತ್ತು ಶಾಶ್ವತ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ ಜೂನ್ 10ರಂದು ಪುಣಚ ಗ್ರಾಮ ಪಂಚಾಯಿತಿ ಮುಂಭಾಗ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ತಿಳಿಸಿದರು.
ಅವರು ಗುರುವಾರ ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪುಣಚ ಗ್ರಾಮದ ಆಜೇರು ಎಂಬಲ್ಲಿ ಪರಿಶಿಷ್ಟ ಪಂಗಡದವರು ಹಾಗೂ ಇತರ ಜಾತಿಯವರು ವಾಸ ಮಾಡುವ ಹಲವು ಕುಟುಂಬಗಳಿವೆ. ಇಲ್ಲಿಗೆ ತೆರಳುವ ರಸ್ತೆಗೆ ಡಾಂಬರೀಕರಣಗೊಂಡಿಲ್ಲ. ಈ ಭಾಗದಲ್ಲಿ ನೀರಿನ ಸಮಸ್ಯೆವೂ ಇದೆ. ಡಾಂಬರೀಕರಣ ಹಾಗೂ ಶಾಸ್ವತ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಈ ಹಿಂದೆ ಸಂಬಂಧಪಟ್ಟ ಇಲಾಖೆಗೆ, ಶಾಸಕರಿಗೆ, ಸಂಸದರಿಗೆ, ಮನವಿ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಯಾವುದೇ ರೀತಿಯ ಸ್ಪಂದನೆ ಸಿಕ್ಕಿಲ್ಲ. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಲಾಗಿತ್ತು. ಬಳಿಕ ಅಲ್ಪ ಡಾಂಬರೀಕರಣ ಮಾಡುವ ಮೂಲಕ ಇಲ್ಲಿನ ನಿವಾಸಿಗಳ ಕಣ್ಣೊರೆಸುವ ತಂತ್ರ ರೂಪಿಸಿದ್ದರು. ಬಳಿಕ ಚುನಾವಣೆ ಬಹಿಷ್ಕಾರ ಹಿಂತೆಗೆದುಕೊಳ್ಳಲಾಗಿತ್ತು. ಇದೀಗ ಈ ಭಾಗಕ್ಕೆ ಡಾಂಬರೀಕರಣ ನಡೆಸಬೇಕು. ಶಾಶ್ವತ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಮಸ್ಯೆ ಈಡೇರದಿದ್ದಲ್ಲಿ ಪ್ರತಿಭಟನೆ ರಾತ್ರಿವರೆಗೂ ಮುಂದುವರೆಯಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ಸೋಮಪ್ಪ ನಾಯ್ಕ ಮಲ್ಯ, ತಿಮ್ಮಣ್ಣ ಆಜೇರು, ಸುರೇಶ್ ಆಜೇರು, ಕೃಷ್ಣ ನಾಯ್ಕ ಮಲ್ಯ, ಪ್ರಸಾದ್ ಅನಂತಾಡಿ ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...