Tuesday, February 3, 2026

ಪುಣಚ: ಕೃಷಿಕಯಲ್ಲಿ ಆಧುನಿಕ ತಂತ್ರಜ್ಞಾನ ತರಬೇತಿ

ವಿಟ್ಲ: ಅಡ್ಯನಡ್ಕ ಸ್ನೇಹ ಟ್ರೇಡರ್‍ಸ್ ವತಿಯಿಂದ ಪುಣಚ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಮಾಹಿತಿ ಮತ್ತು ತರಬೇತಿ ಕಾರ್‍ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಅಗ್ರಿಪ್ಲಾಸ್ಟ್ ಕಂಪೆನಿ ಬೆಂಗಳೂರು ಇದರ ತಂತ್ರಜ್ಞರಾದ ಹರಿಪ್ರಸಾದ್ ಇವರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ವಿಧಾನ ಅಳವಡಿಸಿ ಅಧಿಕ ಇಳುವರಿ ಪಡೆಯುವ ಬಗ್ಗೆ ಮಾಹಿತಿ ನೀಡಿದರು. ಯಾವ ಬೆಳೆಗೆ ಯಾವ ಬಣ್ಣದ ಶೇಡ್ ನೆಟ್ ಸೂಕ್ತ, ಅಡಕೆ ಪಾಲಿಹೌಸ್, ನರ್ಸರಿ ಪಾಲಿಹೌಸ್, ಟ್ರೀಗಾರ್ಡ್, ಗ್ರೌಂಡ್‌ಕವರ್ ಹಾಗೂ ಮಲ್ಚಿಂಗ್ ಶೀಟ್‌ನ ಆಯ್ಕೆ ಮತ್ತು ಕೃಷಿಯಲ್ಲಿ ಅಳವಡಿಸುವ ಬಗ್ಗೆ ಮಾಹಿತಿ ನೀಡಿದರು.
ಪುಣಚ ಸೇವಾ ಸಹಕಾರಿ ಸಂಘದ ಅಧ್ಯಕ್ಷ ದೇವಿಪ್ರಸಾದ್ ಕಲ್ಲಾಜೆ ಭಾಗವಹಿಸಿದ್ದರು.
ಸ್ನೇಹ ಟ್ರೇಡರ್ಸ್‌ನ ಮುರಲೀಧರ ಶಾಸ್ತ್ರಿ ಮೂಡಂಬೈಲು ಸ್ವಾಗತಿಸಿ ಪ್ರಸ್ತಾವನೆಗೈದರು. ಪ್ರತಿಭಾ ಶಾಸ್ತ್ರಿ ವಂದಿಸಿದರು. ಸುಮನ ಶಾಸ್ತ್ರಿ ನಿರೂಪಿಸಿದರು. ರಾಮಚಂದ್ರ ಶಾಸ್ತ್ರಿ ಮೂಡಂಬೈಲು ಕಾರ್‍ಯಕ್ರಮ ಸಂಯೋಜಿಸಿದರು.

More from the blog

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...

ಮತ್ತೆ ಚಿನ್ನದ ಬೆಲೆ ಕುಸಿತ ! ಇಂದಿನ ದರ ಎಷ್ಟಿದೆ ಗೊತ್ತಾ?

ಮಂಗಳೂರು: ಕಳೆದ ಕೆಲವು ದಿನಗಳಿಂದ ದಾಖಲೆಯ ಮಟ್ಟಕ್ಕೆ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈಗ ಸತತವಾಗಿ ಇಳಿಕೆ ಕಾಣುತ್ತಿವೆ. ಫೆಬ್ರವರಿ 3 2026, ಮಂಗಳವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್‌ನ ಚಿನ್ನದ ಬೆಲೆಯು...

ರಾಜ್ಯದ ರೈಲ್ವೆ ಯೋಜನೆಗಳಿಗೆ 7748 ಕೋಟಿ ರೂ. ಅನುದಾನ : ಸಚಿವ ವಿ.ಸೋಮಣ್ಣ

ಬೆಂಗಳೂರು : ರಾಜ್ಯದ ರೈಲ್ವೆ ಯೋಜನೆಗಳಿಗೆ ಬಜೆಟ್‌ನಲ್ಲಿ 7748 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಈ ವಿಚಾರವಾಗಿ ಮಾಹಿತಿ ನೀಡಿದ ಅವರು, 2009ರಿಂದ...

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...