Tuesday, July 1, 2025

ಅಕ್ರಮವಾಗಿ ದನದ ಮಾಂಸ‌ ಮಾರಾಟಕ್ಕೆ ಯತ್ನ ಮೂವರ ಬಂಧಿಸಿದ ಪುಂಜಾಲಕಟ್ಟೆ ಎಸ್. ಐ.ಸೌಮ್ಯ

ಬಂಟ್ವಾಳ: ದನಗಳನ್ನು ವಧೆ ಮಾಡಿ ಅಕ್ರಮವಾಗಿ ಮಾಂಸ ಮಾರಟಕ್ಕಾಗಿ ಸಾಗಾಣಿಕೆ ಮಾಡುವ ಸಮಯದಲ್ಲಿ ಮೂವರು ಆರೋಪಿಗಳನ್ನು ಪುಂಜಾಲಕಟ್ಟೆ ಕಟ್ಟೆ ಪೋಲೀಸರು ಬಂಧಿಸಿ, ಮಾಂಸ ಸಹಿತ ವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲು ಮಾಡಿದ ಘಟನೆ ರಾತ್ರಿ ವೇಳೆ ನಡೆದಿದೆ. ‌ ಅರೆಕಳ ನಿವಾಸಿ ಕಾಸಿಂ ಮತ್ತು ಕಕ್ಕ್ಯೆಪದವು ಉಳಿ ನಿವಾಸಿ ಅಬ್ದುಲ್ ಹಾರೀಶ್, ಕಾವಳಕಟ್ಟೆ ನಿವಾಸಿ ಹಸನ್ ಸಾಹೇಬ್ ಬಂಧಿತ ಆರೋಪಿಗಳು ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 6.60.ಲಕ್ಷ. ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆ ನಂದಗೋಕುಲ ಕಲ್ಯಾಣ ಮಂಟಪ ದ ಬಳಿ ಪುಂಜಾಲಕಟ್ಟೆ ಠಾಣಾ ಪೋಲೀಸರು ವಾಹನ ತಪಾಸಣೆ ಮಾಡುತ್ತಿರುವ ವೇಳೆ ಬೆಳ್ತಂಗಡಿ ಕಡೆಯಿಂದ ಬಂಟ್ವಾಳ ಕಡೆಗೆ ಪಿಕ್ ಆಪ್ ವಾಹನದಲ್ಲಿ ಪರವಾನಿಗೆ ರಹಿತವಾಗಿ ಹಿಂಸಾತ್ಮಕ ವಾಗಿ ಎರಡು ದನಗಳನ್ನು ವಧೆ ಮಾಡಿ ಮಾಂಸವನ್ನು ಮಾರಾಟ ಮಾಡಲು ಸಾಗಾಣಿಕೆ ಮಾಡುವ ಉದ್ದೇಶದಿಂದ ಬರುತ್ತಿದ್ದಾಗ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ ಬಳಿಕ ಪ್ರಕರಣ ದಾಖಲಿಸಲಾಗಿದೆ . ಪುಂಜಾಲಕಟ್ಟೆ ಎಸ್. ಐ. ಸೌಮ್ಯ ಮತ್ತು ಸಿಬ್ಬಂದಿ ಗಳಾದ ಎ.ಎಸ್.ಐ ಬಾಸ್ಕರ್, ಪ್ರಶಾಂತ್, ಸಾಬುಮಿರ್ಜಿ, ಮತ್ತಿತರರು ಕಾರ್ಯಚರಣೆ ನಡೆಸಿದ್ದಾರೆ.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...