Saturday, February 8, 2025

ಅಕ್ರಮವಾಗಿ ದನದ ಮಾಂಸ‌ ಮಾರಾಟಕ್ಕೆ ಯತ್ನ ಮೂವರ ಬಂಧಿಸಿದ ಪುಂಜಾಲಕಟ್ಟೆ ಎಸ್. ಐ.ಸೌಮ್ಯ

ಬಂಟ್ವಾಳ: ದನಗಳನ್ನು ವಧೆ ಮಾಡಿ ಅಕ್ರಮವಾಗಿ ಮಾಂಸ ಮಾರಟಕ್ಕಾಗಿ ಸಾಗಾಣಿಕೆ ಮಾಡುವ ಸಮಯದಲ್ಲಿ ಮೂವರು ಆರೋಪಿಗಳನ್ನು ಪುಂಜಾಲಕಟ್ಟೆ ಕಟ್ಟೆ ಪೋಲೀಸರು ಬಂಧಿಸಿ, ಮಾಂಸ ಸಹಿತ ವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲು ಮಾಡಿದ ಘಟನೆ ರಾತ್ರಿ ವೇಳೆ ನಡೆದಿದೆ. ‌ ಅರೆಕಳ ನಿವಾಸಿ ಕಾಸಿಂ ಮತ್ತು ಕಕ್ಕ್ಯೆಪದವು ಉಳಿ ನಿವಾಸಿ ಅಬ್ದುಲ್ ಹಾರೀಶ್, ಕಾವಳಕಟ್ಟೆ ನಿವಾಸಿ ಹಸನ್ ಸಾಹೇಬ್ ಬಂಧಿತ ಆರೋಪಿಗಳು ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 6.60.ಲಕ್ಷ. ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆ ನಂದಗೋಕುಲ ಕಲ್ಯಾಣ ಮಂಟಪ ದ ಬಳಿ ಪುಂಜಾಲಕಟ್ಟೆ ಠಾಣಾ ಪೋಲೀಸರು ವಾಹನ ತಪಾಸಣೆ ಮಾಡುತ್ತಿರುವ ವೇಳೆ ಬೆಳ್ತಂಗಡಿ ಕಡೆಯಿಂದ ಬಂಟ್ವಾಳ ಕಡೆಗೆ ಪಿಕ್ ಆಪ್ ವಾಹನದಲ್ಲಿ ಪರವಾನಿಗೆ ರಹಿತವಾಗಿ ಹಿಂಸಾತ್ಮಕ ವಾಗಿ ಎರಡು ದನಗಳನ್ನು ವಧೆ ಮಾಡಿ ಮಾಂಸವನ್ನು ಮಾರಾಟ ಮಾಡಲು ಸಾಗಾಣಿಕೆ ಮಾಡುವ ಉದ್ದೇಶದಿಂದ ಬರುತ್ತಿದ್ದಾಗ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ ಬಳಿಕ ಪ್ರಕರಣ ದಾಖಲಿಸಲಾಗಿದೆ . ಪುಂಜಾಲಕಟ್ಟೆ ಎಸ್. ಐ. ಸೌಮ್ಯ ಮತ್ತು ಸಿಬ್ಬಂದಿ ಗಳಾದ ಎ.ಎಸ್.ಐ ಬಾಸ್ಕರ್, ಪ್ರಶಾಂತ್, ಸಾಬುಮಿರ್ಜಿ, ಮತ್ತಿತರರು ಕಾರ್ಯಚರಣೆ ನಡೆಸಿದ್ದಾರೆ.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...