Thursday, January 29, 2026

ಪತಿಗೆ ತಿಳಿಯದಂತೆ ಪತ್ನಿ 2ನೇ ವಿವಾಹ.. ಕೋರ್ಟ್‌ ಮೊರೆ ಹೋದ ಪತಿ

ಪುಂಜಾಲಕಟ್ಟೆ: ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹವಾದ ಬಗ್ಗೆ ಪತಿ ನ್ಯಾಯಾಲಯಕ್ಕೆ ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ಆದೇಶಿಸಿದ ಘಟನೆ ನಡೆದಿದೆ.

ಪಣಕಜೆ, ಮಂಡಾಡಿ ನಿವಾಸಿ ಉದಯ ನಾಯಕ್‌ ಅವರು ಈ ಬಗ್ಗೆ ನ್ಯಾಯಾಲಯಕ್ಕೆ ದೂರು ನೀಡಿದ್ದು, ಬೆಳ್ತಂಗಡಿ ಸಿಜೆ ಮತ್ತು ಜೆಎಮ್‌ಎಫ್ಸಿ ನ್ಯಾಯಾಲಯ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ಆದೇಶಿಸಿದೆ.

ಉದಯ ನಾಯಕ್‌ ಅವರು ಅನಿತಾ ನಾಯಕ್‌ ಅವರನ್ನು 2018ರಲ್ಲಿ ಮದುವೆಯಾಗಿದ್ದು, ಮದುವೆ ಬಳಿಕ ಜೂನ್‌ 2020ರ ತನಕ ಇಬ್ಬರೂ ಒಟ್ಟಿಗೆ ಇದ್ದರು. ಬಳಿಕ ಹಲವಾರು ಅಡೆತಡೆಗಳು ಬಂದಿದ್ದರಿಂದ ಉದಯ ನಾಯಕ್‌ ಡೈವೋರ್ಸ್‌ ಪಿಟಿಷನ್‌ ಸಲ್ಲಿಸಿದ್ದರು. ಈ ಪ್ರಕರಣವು ವಿಚಾರಣೆಯಲ್ಲಿರುವಾಗಲೇ ಅನಿತಾ ಅವರು ಹರಿಕೃಷ್ಣ ಗಣಪತ್‌ ರಾವ್‌ ಕೀಳು ಅವರ ಜತೆ ವಿವಾಹವಾಗಿರುವುದಾಗಿ ಉದಯ ನಾಯಕ್‌ ಆರೋಪಿಸಿದ್ದಾರೆ. ಈ ಮದುವೆಯು ಕಾನೂನು ಬಾಹಿರವಾಗಿದ್ದರಿಂದ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಸಧ್ಯ ಈ ಬಗ್ಗೆ ಪುಂಜಾಲಕಟ್ಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...