Monday, January 26, 2026

ಪುಂಜಾಲಕಟ್ಟೆ: ರಸ್ತೆ ಸುರಕ್ಷತಾ ಸಪ್ತಾಹ, ಜಾಥ

ಬಂಟ್ವಾಳ: ವಾಹನ ಚಾಲಕರು ಪ್ರತಿಯೊಬ್ಬರೂ ವಾಹನ ಚಾಲನ ಪರವಾನಿಗೆ ಪಡಕೊಳ್ಳುವುದು ಕಡ್ಡಾಯ. ವಾಹನಗಳ ದಾಖಲೆಯನ್ನು ಪ್ರತಿವರ್ಷ ಸರಿಯಾಗಿ ನಿರ್ವಹಣೆ ಮಾಡುವುದರಿಂದ ಸರಕಾರಕ್ಕೆ ದಂಡ ಪಾವತಿಯನ್ನು ತಪ್ಪಿಸಬಹುದು ಎಂದು ಬಂಟ್ವಾಳ ಪ್ರಭಾರ ಸಹಾಯಕ ಪ್ರಾದೇಶಿಕ ಸಾರಿಗೆ ಅಬಕಾರಿ ಚರಣ್ ಅವರು ಹೇಳಿದರು.


ಪುಂಜಾಲಕಟ್ಟೆ ಆರಕ್ಷಕ ಠಾಣೆ ವತಿಯಿಂದ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ.ಪೂ.ವಿಭಾಗದ ಸಹಕಾರದಲ್ಲಿ ಪುಂಜಾಲಕಟ್ಟೆಯಲ್ಲಿ ಗುರುವಾರ ನಡೆದ ರಸ್ತೆ ಸುರಕ್ಷತಾ ಸಪ್ತಾಹ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾಹಿತಿ ನೀಡಿದರು.
ಸರಕುಗಳನ್ನು ಆಟೊ ರಿಕ್ಷಾಗಳಲ್ಲಿ ಸಾಗಾಟ ಮಾಡಬಾರದು. ಆರ್.ಸಿ.ಯಲ್ಲಿ ನಿಗದಿಪಡಿಸಿದ ಸಂಖ್ಯೆಯ ಜನರನ್ನು ಮಾತ್ರ ಸಾಗಿಸಬೇಕು ಹಾಗೂ ಆಟೊ ರಿಕ್ಷಾಗಳ ಮುಂದಿನ ಸೀಟ್‌ಗಳಲ್ಲಿ ಜನರನ್ನು ಸಾಗಿಸಬಾರದು ಎಂದರು.


ತಗ್ಗಿ ಕಂಡಗು ಮೂಜಿ ಬುಲೆ ಎಂಬ ಗಾದೆ ಮಾತನ್ನು ನೆನಪಿಸಿ ಚಾಲನೆಯಲ್ಲಿ ತಾಳ್ಮೆ, ಸಹನೆ, ಮತ್ತು ನಿಗದಿತ ವೇಗದಲ್ಲಿ ವಾಹನ ಚಲಾಯಿಸಿ ಅಪಘಾತವನ್ನು ತಡೆಗಟ್ಟಬಹುದು ಎಂದು ಸಲಹೆ ನೀಡಿದರು. ಇತ್ತಿಚಿನ ದಿನಗಳಲ್ಲಿ ಬದಲಾದ ದಂಡದ ಬಗ್ಗೆ ಮಾಹಿತಿ ನೀಡಿದರು. ಚಾಲಕರ ಹಾಗೂ ಮಾಲಕರ ಪ್ರಶ್ನೆಗಳಿಗೆ ಉತ್ತರಿಸಿದರು.
ಪುಂಜಾಲಕಟ್ಟೆ ಪ.ಪ.ಪೂ. ಕಾಲೇಜು ಮೈದಾನದಿಂದ ಮಡಂತ್ಯಾರು ಪೇಟೆ ವರೆಗೆ ರಸ್ತೆ ಸುರಕ್ಷತಾ ಜಾಥ ನಡೆಸಲಾಯಿತು. ವಿದ್ಯಾರ್ಥಿಗಳು ಜಾಗೃತಿ ಫಲಕಗಳನ್ನು ಪ್ರದರ್ಶಿಸಿ, ಘೋಷಣೆ ನಡೆಸಿದರು.


ಈ ಸಂದರ್ಭದಲ್ಲಿ ಪುಂಜಾಲಕಟ್ಟೆ ಠಾಣಾಧಿಕಾರಿ ಸೌಮ್ಯಾ ಜೆ., ಪ.ಪೂ.ಕಾಲೇಜು ಉಪನ್ಯಾಸಕಿ ಮಮತಾ, ಪ್ರೌಢಶಾಲಾ ಶಿಕ್ಷಕ ಧರಣೇಂದ್ರ ಜೈನ್, ಪುಂಜಾಲಕಟ್ಟೆ ಪೊಲೀಸ್ ಠಾಣಾ ಸಿಬಂದಿಗಳು ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...