Friday, February 14, 2025

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ತುಳು ನಾಟಕ ಸ್ಪರ್ಧೆಗೆ ತಂಡಗಳ ಆಯ್ಕೆ

ಬಂಟ್ವಾಳ: ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಹಾಗೂ ಶ್ರೀ ಮುರುಘೇಂದ್ರ ವನಿತಾ ಸಮಾಜ ಇದರ ನೇತೃತ್ವದಲ್ಲಿ ಮಿತ್ರ ಮಂಡಳಿಯ ಸ್ಥಾಪಕಾಧ್ಯಕ್ಷ ದಿ| ಪದ್ಮ ಮೂಲ್ಯ ಅನಿಲಡೆ ಅವರ ಸ್ಮರಣಾರ್ಥ ದ.ಕ., ಉಡುಪಿ, ಕಾಸರಗೋಡು ಜಿಲ್ಲಾ ಮಟ್ಟದ ತುಳು ನಾಟಕ ಸ್ಪರ್ಧೆಗೆ ತಂಡಗಳ ಆಯ್ಕೆ ನಡೆದಿದೆ.
ಮಿತ್ರ ಮಂಡಳಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಂಡಗಳಿಗೆ ದಿನಾಂಕ ಆಯ್ಕೆ ಪ್ರಕ್ರಿಯೆ ನಡೆಯಿತು. ಮಿತ್ರ ಮಂಡಳಿಯ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಮೋಹನ್ ಸಾಲ್ಯಾನ್, ಪದಾಧಿಕಾರಿಗಳಾದ ಪಿ. ಕಾಂತಪ್ಪ ಟೈಲರ್, ಜಯರಾಜ್ ಅತ್ತಾಜೆ, ಮಂಜಪ್ಪ ಮೂಲ್ಯ, ರಾಜೇಶ್ ಪಿ., ವನಿತಾ ಸಮಾಜದ ಅಧ್ಯಕ್ಷೆ ಆಶಾ ದಿನಕರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸರ್ಧೆಗೆ ಆಯ್ಕೆಗಾಗಿ ಒಟ್ಟು 16 ತಂಡಗಳ ಕೃತಿಗಳು ನೊಂದಾಯಿಸಿದ್ದು, ಅಂತಿಮವಾಗಿ 7 ತಂಡಗಳನ್ನು ಆಯ್ಕೆ ಸಮಿತಿ ಆಯ್ಕೆಗೊಳಿಸಿದೆ. ಆಯ್ಕೆಯಾದ ತಂಡಗಳ ಉಪಸ್ಥಿತಿಯಲ್ಲಿ ಚೀಟಿ ಎತ್ತುವ ಮೂಲಕ ಆಯಾ ತಂಡಗಳ ಸರ್ಧಾ ದಿನಾಂಕ ನಿಗದಿಗೊಳಿಸಲಾಯಿತು.
ರಾಜೇಂದ್ರ ಕೆ.ವಿ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸಂತೋಷ್ ಮೂರ್ಜೆ ವಂದಿಸಿದರು.
ಫೆ. 23ರಂದು ನಾಟಕ ಸರ್ಧೆ ಉದ್ಘಾಟನೆಗೊಳ್ಳಲಿದ್ದು, ಮುದರಂಗಡಿ ಶ್ರೀ ಗುರು ಕಲಾ ತಂಡದ ನಾಟಕ ವಾಸುದೇವೇರ್ನ ಕುಟುಂಬ, ಫೆ. 24 ರಂದು ಧರಿತ್ರಿ ಕಲಾವಿದರು ಕುಡ್ಲ-ಇಂಚಾಂಡ ಎಂಚ, ಫೆ. 25ರಂದು ಕುಸಾಲ್ದ ಕಲಾವಿದೆರ್ ಸುಂಕದಕಟ್ಟೆ ಬಜ್ಪೆ-ಬರೇದಾತ್ಂಡ್ ಒಚ್ಚೇರಾಪುಜಿ, ಫೆ. 26ರಂದು ಪ್ರಸನ್ನ ಕಲಾವಿದೆರ್ ಬಲೂರು ಉಡುಪಿ-ಮೇ 22, ಫೆ. 27ರಂದು ತುಳುವೆರೆ ಕಡಲ್ ಕಲಾವಿದೆರ್ ಜೋಡುಕಲ್ಲು-ಶ್ರೀಮತಿ, ಫೆ. 28ರಂದು ನಮ್ಮ ಕಲಾವಿದರು ನೆಲ್ಯಾಡಿ-ಮಗೆ ದುಬಡ್, ಮಾ. 1ರಂದು ಅಭಿನಯ ಕಲಾವಿದೆರ್ ಉಡುಪಿ-ಬರಂದೆ ಕುಲ್ಲಯೆ ಹಾಗೂ ಮಾ. 2ರಂದು ಸಮಾರೋಪ ಸಮಾರಂಭ ನಡೆಯಲಿದೆ.

More from the blog

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

  ಬೆಂಗಳೂರು:    ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ...

ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶ: ಬಂಟ್ವಾಳ ತಾಲೂಕು ಸಮಿತಿ ಪ್ರಮುಖರ ಸಭೆ

  ಬಂಟ್ವಾಳ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಉಚ್ಚಂಗೀ ಸಹಿತ ಕಾಪು ಸಾವಿರ ಸೀಮೆಯ ಒಡತಿ ಶ್ರೀ ಮಾರಿಯಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನಿಂದ ಹೊರೆಕಾಣಿಕೆ ಸಮರ್ಪಣೆ ಹಾಗೂ ಆಮಂತ್ರಣ ಪತ್ರಿಕೆ...

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕದ ವಾರ್ಷಿಕೋತ್ಸವ

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ ಇದರ ವಾರ್ಷಿಕೋತ್ಸವ ಹಾಗೂ ಮಹಾಸಭೆಯು ಶಾರದಾ ಸಭಾಭವನ ರಾಮಲ್ಕಟ್ಟೆ ತುಂಬೆಯಲ್ಲಿ ನಡೆಯಿತು. ಪುರ್ವಾನ್ಹ ವಾರ್ಷಿಕೋತ್ಸವವನ್ನು ಸಂಘದ ಅಧ್ಯಕ್ಷರಾದ ಶಿವಕುಮಾರ್ ಉದ್ಘಾಟಿಸಿದರು. ಅಪರಾನ್ಹ 3 ಘಂಟೆಗೆ...

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...