Wednesday, February 12, 2025

ವಾಣಿಜ್ಯ ಕೈಗಾರಿಕಾ ಹಾಗೂ ಮಳಿಗೆಗಳ ತ್ಯಾಜ್ಯ ಸಂಗ್ರಹಣಾ ಶುಲ್ಕ ಕಡಿಮೆ ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿ

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಅಸ್ತಿ ತೆರಿಗರಯೊಂದಿಗೆ ತ್ಯಾಜ್ಯ
ಸಂಗ್ರಹಣಾ ಶುಲ್ಕವನ್ನು 2019 2020 ನೇ ಸಾಲಿಗೆ ಸರಕಾರದ ಅದೇಶದಂತೆ ಕ್ರಮವನ್ನು ಜಾರಿಗೊಳಿಸಲಾಗಿತ್ತು.
ಆದರೆ ಈಶುಲ್ಕ ಅತ್ಯಧಿಕವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಅವರಿಗೆ ದೂರನ್ನು ಬಂಟ್ವಾಳ ಪುರವಾಸಿಗಳು ನೀಡಿದ್ದರು.
ಈ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪುರಸಭೆಯಲ್ಲಿ ವಿಶೇಷ ಸಭೆ ಕರೆದು ತ್ಯಾಜ್ಯ ಸಂಗ್ರಹಣಾ ಶುಲ್ಕ ವನ್ನು ಕಡಿತಗೊಳಿಸಲು ಸಹಾಯಕ ಆಯುಕ್ತರಿಗೆ ನಿರ್ದೇಶನ ನೀಡಿದ್ದರು.
ಇದರಂತೆ ಜುಲೈ 20 ರಂದು ಆಡಳಿತಾಧಿಕಾರಿ ಯವರ ಸಾಮಾನ್ಯ ಸಭೆಯಲ್ಲಿ ಮನೆಗಳ ತ್ಯಾಜ್ಯ ಸಂಗ್ರಹಣಾ ಶುಲ್ಕ ವನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಿ ವಾಣಿಜ್ಯ ಕೈಗಾರಿಕಾ ಹಾಗೂ ಮಳಿಗೆಗಳ ತ್ಯಾಜ್ಯ ಸಂಗ್ರಹಣಾ ಶುಲ್ಕವನ್ನು ಡಿ.ಪಿ.ಆರ್.ದರಗಿಂತ ಕಡಿಮೆ ಮಾಡಲಾಗಿದೆ ಎಂದು ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿ ಪತ್ರಿಕಾ ಪ್ರಕಟಣೆಯ ಲ್ಲಿ ತಿಳಿಸಿದ್ದಾರೆ.

ಬಿಜೆಪಿ ಅಭಿನಂದನೆ :

ಕಳೆದ ಜುಲೈ 2 ರಂದು ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಂಟ್ವಾಳ ಪುರಸಭೆಯಲ್ಲಿ ಅಧಿಕಾರಿಗಳ ಜತೆ ಪುರಸಭೆಯ ಕುಂದುಕೊರತೆಗಳ ಬಗ್ಗೆ ಸಭೆ ಕರೆದ ಸಂದರ್ಭದಲ್ಲಿ ಪುರಸಭೆಯ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದರು.
ಅದರಲ್ಲಿ ಬಹಳ ಪ್ರಾಮುಖ್ಯವಾದುದು ಕಟ್ಟಡ ತೆರಿಗೆಯ ಜತೆ ತ್ಯಾಜ್ಯ ಸಂಗ್ರಹಣ ಶುಲ್ಕ ವಸೂಲಾತಿಯು ಅಸಮರ್ಪಕವಾಗಿ ಜನಸಾಮಾನ್ಯರಿಗೆ ಹೊರೆಯಾಗಿದೆ ಎಂಬ ಜನರ ದೂರಿನ ಬಗ್ಗೆ ಚರ್ಚೆ.
ವಾಣಿಜ್ಯ ಉದ್ದೇಶದ ಕಟ್ಟಡಗಳ ತ್ಯಾಜ್ಯ ಸಂಗ್ರಹಣ ಶುಲ್ಕ ಅತಿಯಾಗಿದ್ದು ಅದನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲಿಸುವಂತೆ ಶಾಸಕರು ಸೂಚನೆಯನ್ನು ನೀಡಿದ್ದರು.
ಈ ಬಗ್ಗೆ ನಂತರದ ದಿನಗಳಲ್ಲಿಯೂ ಶಾಸಕರು ನಿರಂತರವಾಗಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ಪರಿಣಾಮವಾಗಿ ವಾಣಿಜ್ಯ ಉದ್ದೇಶದ ಕಟ್ಟಡಗಳ ತ್ಯಾಜ್ಯ ಸಂಗ್ರಹಣ ಶುಲ್ಕವನ್ನು ಇದೀಗ ಪರಿಷ್ಕರಿಸಲಾಗಿದೆ.
ಶಾಸಕರ ಸೂಚನೆಯಂತೆ ದರ ಪರಿಷ್ಕರಣೆ ಮಾಡಿದ ಅಧಿಕಾರಿಗಳ ಕ್ರಮವನ್ನು ಬಂಟ್ವಾಳ ಕ್ಷೇತ್ರ ಬಿಜೆಪಿಯು ಸ್ವಾಗತಿಸಿ ಮಾನ್ಯ ಶಾಸಕರನ್ನು ಮತ್ತು ಅಧಿಕಾರಿ ವರ್ಗವನ್ನು ಅಭಿನಂದಿಸುವುದು.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೆಲವೊಂದು ಪ್ರದೇಶಗಳಲ್ಲಿ ತ್ಯಾಜ್ಯ ಸಂಗ್ರಹ ವ್ಯವಸ್ಥೆ ಇಲ್ಲದಿದ್ದು ಅಂತಹ ಪ್ರದೇಶಗಳ ಜನರು ವ್ಯವಸ್ಥೆ ಇಲ್ಲದಿದ್ದರೂ ಕಟ್ಟಡ ತೆರಿಗೆ ಪಾವತಿಯ ಜತೆ ತ್ಯಾಜ್ಯ ಸಂಗ್ರಹ ಶುಲ್ಕ ಪಾವತಿಸಬೇಕಾಗಿದೆ. ಈ ಬಗ್ಗೆಯೂ ಅಧಿಕಾರಿ ವರ್ಗ ಗಮನಹರಿಸ ಬೇಕಾಗಿ ವಿನಂತಿವುದು ಎಂದು ಬಂಟ್ವಾಳ ಬಿಜೆಪಿ ಅಧ್ಯಕ್ಷ
ಬಿ.ದೇವದಾಸ್ ಶೆಟ್ಟಿ ತಿಳಿಸಿದ್ದಾರೆ.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...