Thursday, January 29, 2026

ಹಾರಿಕೆ ಉತ್ತರದ ಅಗೌರವ : ವಿಪಕ್ಷ ಬಿಜೆಪಿ ಸಭಾತ್ಯಾಗ

ಬಂಟ್ವಾಳ : ಹಿರಿಯ ಸದಸ್ಯರಿಗೆ ಪುರಸಭೆಯ ಇಂಜಿನಿಯರ್ ಹಾರಿಕೆಯ ಉತ್ತರ ನೀಡಿ ಅಗೌರವ ನೀಡಿದ್ದಾರೆ ಎಂದು ಆರೋಪಿಸಿ,‌ವಿಪಕ್ಷ ಬಿಜೆಪಿ ಸದಸ್ಯರು ಸಭಾತ್ಯಾಗ ನಡೆಸಿದ ಘಟನೆ ಸೋಮವಾರ ಬಂಟ್ವಾಳ ಪುರಸಭೆಯಲ್ಲಿ ನಡೆಯಿತು.

ಇಲ್ಲಿನ ಪುರಸಭೆಯ ಸಾಮಾನ್ಯ ಸಭೆಯು ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.

ಬಂಟ್ವಾಳ ಪುರಸಭೆಗೆ ಸಂಬಧಿಸಿ ಸರ್ವೇ ಕಾರ್ಯಕ್ಕೆ ಸರ್ವೇ ಇಲಾಖೆಯವರು ಸ್ಪಂದನೆ ನೀಡದೇ ಇರುವ ವಿಚಾರವನ್ನು ಸದಸ್ಯ ಗೋವಿಂದ ಪ್ರಭು ಅವರು ಪ್ರಶ್ನಿಸಿದ್ದರು. ಈ ವೇಳೆ ಪುರಸಭಾ ಎಂಜಿನಿಯರ್ ನೀಡಿದ ಉತ್ತರ ವಿಪಕ್ಷ ಬಿಜೆಪಿಗೆ ಸಮಾಧಾನ ತರಲಿಲ್ಲ.

ನಾನು ಕಳೆದ ಮೂರು ತಿಂಗಳಿನಿಂದ ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದೇನೆ ,ಆದರೂ ಸಮರ್ಪಕ ಉತ್ತರ ದೊರಕುತ್ತಿಲ್ಲ ಎಂದು ಪ್ರಭು ಅವರು ಸಭಾ ತ್ಯಾಗ ನಡೆಸಿದರು. ಈ ವೇಳೆ ಸದಸ್ಯ ಹರಿಪ್ರಸಾದ್ ಮಾತನಾಡಿ, ಹಿರಿಯ ಸದಸ್ಯರಿಗೆ ಗೌರವ ನೀಡದ ಸಭೆಯಲ್ಲಿ ನಾವು ಕೂಡ ಕುಳಿತುಕೊಳ್ಳುವುದಿಲ್ಲ ಎಂದು ಬಿಜೆಪಿಯ ಎಲ್ಲಾ ಸದಸ್ಯರು ಸಭಾ ತ್ಯಾಗ ನಡೆಸಿದರು.

ಈ ವೇಳೆ ಸದಸ್ಯರಾದ ಸಿದ್ದೀಕ್ ಹಾಗೂ ಮುನೀಶ್ ಆಲಿ ಮಾತನಾಡಿ, ಸದಸ್ಯರು ಈ ರೀತಿ ಸಭಾತ್ಯಾಗ ನಡೆಸಿದಾಗ ಆಡಳಿತ ಸುಮ್ಮನೆ ಕೂರುವುದು ಸರಿಯಲ್ಲ. ಹೀಗಾಗಿ ಅವರನ್ನು ಮನವೊಲಿಸಿ ಸಭೆಯಲ್ಲಿ ಕುಳಿತುಕೊಳ್ಳುವಂತೆ ಮಾಡಬೇಕು ಎಂದು ತಿಳಿಸಿದರು. ಬಳಿಕ ಅಧ್ಯಕ್ಷರು, ಆಡಳಿತ ಪಕ್ಷದ ಸದಸ್ಯರು, ಅಧಿಕಾರಿಗಳು ಮನವೊಲಿಕೆಯ ಪ್ರಯತ್ನ ಮಾಡಿದರು. ಸ್ವಲ್ಪ ಹೊತ್ತಿನ ಬಳಿಕ ಬಿಜೆಪಿಯ ಸದಸ್ಯರು ಮತ್ತೆ ಸಭೆಗೆ ಹಾಜರಾದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...