Wednesday, February 12, 2025

ಇಂದು ಸಂಜೆ 5ರಿಂದ ಮಂಗಳೂರು ಪುರಭವನದಲ್ಲಿ.. ಶ್ರೀರಾಮಾಯಣ ದರ್ಶನಂ

ಮಂಗಳೂರು: ಮೈಸೂರು ರಂಗಾಯಣದ ಕಲಾವಿದರು ಅಭಿನಯಿಸುವ ಕುವೆಂಪು ಮಹಾಕಾವ್ಯ ಶ್ರೀರಾಮಾಯಣ ದರ್ಶನಂ ಆಧಾರಿತ ನಾಟಕ ಇಂದು(ಮಂಗಳವಾರ) ಸಂಜೆ 5 ರಿಂದ ಮಂಗಳೂರು ಪುರಭವನದಲ್ಲಿ ಪ್ರದರ್ಶನಗೊಳ್ಳಲಿದೆ.
5 ಗಂಟೆ ಅವಧಿಯ ಈ ನಾಟಕವು ಆಯತಿ ಮಂಗಳೂರು ಆಯೋಜನೆಯಲ್ಲಿ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗವಿದೆ.


ನಾಟಕದಲ್ಲಿ 50ಕ್ಕೂ ಹೆಚ್ಚು ಪರಿಣತ ಕಲಾವಿದರು ಅಭಿನಯಿಸುತ್ತಿದ್ದು, ಕುವೆಂಪು ಮಹಾಕಾವ್ಯವನ್ನು ಜಗದೀಶ ಮನೆವಾರ್ತೆ ಮತ್ತು ಕೃಷ್ಣಕುಮಾರ ನಾರ್ಣಕರ್ಜೆ ಅವರು ರಂಗರೂಪಕ್ಕೆ ಇಳಿಸಿದ್ದಾರೆ. ಹೆಗ್ಗೋಡಿನ ಕೆ.ಜಿ.ಮಹಬಲೇಶ್ವರ ಅವರು ನಿರ್ದೇಶಿಸಿದ್ದಾರೆ. ಎಚ್‌.ಕೆ.ದ್ವಾರಕನಾಥ್‌ ಅವರು ರಂಗ ವಿನ್ಯಾಸಗೊಳಿಸಿದ್ದು, ಪ್ರಮೋದ್‌ ಶಿಗ್ಗಾಂವ್‌ ವಸ್ತ್ರ ಮತ್ತು ಪರಿಕರ ವಿನ್ಯಾಸದ ಜವಾಬ್ದಾರಿ ಹೊತ್ತಿದ್ದಾರೆ. ಶ್ರೀನಿವಾಸ್‌ ಭಟ್‌ ಸಂಗೀತ ನಿರ್ದೇಶನ, ಮಹೇಶ್‌ ಕಲ್ಲತ್ತಿ ಅವರ ಬೆಳಕಿನ ವಿನ್ಯಾಸವಿದೆ.
ನಾಟಕಕ್ಕೆ 200 ರೂ.ಪ್ರವೇಶ ಶುಲ್ಕ ನಿಗದಿಪಡಿಸಲಾಗಿದ್ದು, ಕಲಾಸಕ್ತರು ಪ್ರೋತ್ಸಾಹಿಸುವಂತೆ ಆಯತಿ ಬಳಗದ ವಿದ್ಧು ಉಚ್ಚಿಲ್ ಮನವಿ ಮಾಡಿದ್ದಾರೆ.
ಇಂದೆ ಬೆಳಗ್ಗಿನಿಂದಲೇ ನಾಟಕದ ಟಿಕೇಟ್ ಗಳು ಪುರಭವನದ ಕೌಂಟರ್ ನಲ್ಲಿ ಲಭ್ಯವಿದೆ ಎಂದು ಅವರು ತಿಳಿಸಿದ್ದಾರೆ.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...