ವಿಟ್ಲ: ಸಾಲೆತ್ತೂರು, ಕೊಳ್ನಾಡು, ವಿಟ್ಲಪಡ್ನೂರುಗಳನ್ನೊಳಗೊಂಡ ಸಾಲೆತ್ತೂರು ವಲಯದ ಬಂಟರ ಸಂಘದ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಬೆಂಗಳೂರು ಬಂಟರ ಸಂಘ ಮತ್ತು ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ಇದರ ಸಹಯೋಗದೊಂದಿಗೆ ನ.17 ರಂದು ಸಾಲೆತ್ತೂರಿನ ಪಾಲ್ತಾಜೆ ಸಿರಿ ವಿದ್ಯಾಲಯದಲ್ಲಿ ಬಂಟರ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಲಿದೆ.
ನ.17ರಂದು ಬೆಳಗ್ಗೆ 9 ಗಂಟೆಗೆ ಕ್ರೀಡಾಕೂಟವನ್ನು ಅಗರಿ ಶ್ರೀ ಧೂಮಾವತಿ ಬಂಟ ದೈವಗಳ ಕಾರ್ಯಕಾರಿ ಸಮಿತಿ ಅಧ್ಯಕ್ಷ ಅಗರಿ ಪಡೆಕುಂಜ ಜಗನ್ನಾಥ್ ನಾಯ್ಕ್ ಉದ್ಘಾಟಿಸಲಿದ್ದಾರೆ.
ಸಭಾಧ್ಯಕ್ಷತೆಯನ್ನು ಸಾಲೆತ್ತೂರು ವಲಯ ಬಂಟರ ಸಂಘ ಅಧ್ಯಕ್ಷ ದೇವಪ್ಪ ಶೇಖ ಪೀಲ್ಯಡ್ಕ ವಹಿಸಲಿದ್ದು, ಅತಿಥಿಗಳಾಗಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಬಂಟವಾಳ ಬಂಟರ ಸಂಘದ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರಿಗುತ್ತು, ಬಂಟರ ಮಾತೃಸಂಘ, ಮಂಗಳೂರು ತಾಲೂಕು ಸಮಿತಿ ಸಂಚಾಲಕ ಜಯರಾಮ ಸಾಂತ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಜೊತೆ ಕಾರ್ಯದರ್ಶಿ ಸತೀಶ ಅಡಪ್ಪ ಸಂಕಬೈಲು, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ.ಅಪರೇಟಿವ್ ಸೊಸೈಟಿ ಅಧ್ಯಕ್ಷ ಜೈರಾಜ್ ಬಿ.ರೈ, ಬಂಟ್ವಾಳ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಬಂಟ್ವಾಳ ಮಹಿಳಾ ಬಂಟರ ಸಂಘದ ಉಪಾಧ್ಯಕ್ಷೆ ಪ್ರತಿಭಾ ರೈ, ಬಂಟರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸದಾನಂದ ಸುಲಾಯ ಬೆಂಗಳೂರು, ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ವಿಟ್ಲಪಡ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರವೀಶ್ ಶೆಟ್ಟಿ ಕರ್ಕಳ, ಕೊಳ್ನಾಡು ತಾ.ಪಂ. ಸದಸ್ಯರಾದ ಕುಲ್ಯಾರು ನಾರಾಯಣ ಶೆಟ್ಟಿ, ವಿಟ್ಲಪಡ್ನೂರು ತಾ.ಪಂ. ಸದಸ್ಯೆ ಶೋಭಾ ರೈ ಎರ್ಮೆನಿಲೆ ಅವರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಕೊಳ್ನಾಡು_ಸಾಲೆತ್ತೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಉದಯ ಕುಮಾರ್ ರೈ ಅಗರಿಯವರಿಗೆ ಸನ್ಮಾನ ನಡೆಯಲಿದೆ.


