Friday, July 11, 2025

ನ.17: ಸಾಲೆತ್ತೂರು ವಲಯ ಬಂಟರ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ

ವಿಟ್ಲ: ಸಾಲೆತ್ತೂರು, ಕೊಳ್ನಾಡು, ವಿಟ್ಲಪಡ್ನೂರುಗಳನ್ನೊಳಗೊಂಡ ಸಾಲೆತ್ತೂರು ವಲಯದ ಬಂಟರ ಸಂಘದ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಬೆಂಗಳೂರು ಬಂಟರ ಸಂಘ ಮತ್ತು ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ಇದರ ಸಹಯೋಗದೊಂದಿಗೆ ನ.17 ರಂದು ಸಾಲೆತ್ತೂರಿನ ಪಾಲ್ತಾಜೆ ಸಿರಿ ವಿದ್ಯಾಲಯದಲ್ಲಿ ಬಂಟರ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಲಿದೆ.
ನ.17ರಂದು ಬೆಳಗ್ಗೆ 9 ಗಂಟೆಗೆ ಕ್ರೀಡಾಕೂಟವನ್ನು ಅಗರಿ ಶ್ರೀ ಧೂಮಾವತಿ ಬಂಟ ದೈವಗಳ ಕಾರ್ಯಕಾರಿ ಸಮಿತಿ ಅಧ್ಯಕ್ಷ ಅಗರಿ ಪಡೆಕುಂಜ ಜಗನ್ನಾಥ್ ನಾಯ್ಕ್ ಉದ್ಘಾಟಿಸಲಿದ್ದಾರೆ.
ಸಭಾಧ್ಯಕ್ಷತೆಯನ್ನು ಸಾಲೆತ್ತೂರು ವಲಯ ಬಂಟರ ಸಂಘ ಅಧ್ಯಕ್ಷ ದೇವಪ್ಪ ಶೇಖ ಪೀಲ್ಯಡ್ಕ ವಹಿಸಲಿದ್ದು, ಅತಿಥಿಗಳಾಗಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಬಂಟವಾಳ ಬಂಟರ ಸಂಘದ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರಿಗುತ್ತು, ಬಂಟರ ಮಾತೃಸಂಘ, ಮಂಗಳೂರು ತಾಲೂಕು ಸಮಿತಿ ಸಂಚಾಲಕ ಜಯರಾಮ ಸಾಂತ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಜೊತೆ ಕಾರ್ಯದರ್ಶಿ ಸತೀಶ ಅಡಪ್ಪ ಸಂಕಬೈಲು, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ.ಅಪರೇಟಿವ್ ಸೊಸೈಟಿ ಅಧ್ಯಕ್ಷ ಜೈರಾಜ್ ಬಿ.ರೈ, ಬಂಟ್ವಾಳ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಬಂಟ್ವಾಳ ಮಹಿಳಾ ಬಂಟರ ಸಂಘದ ಉಪಾಧ್ಯಕ್ಷೆ ಪ್ರತಿಭಾ ರೈ, ಬಂಟರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸದಾನಂದ ಸುಲಾಯ ಬೆಂಗಳೂರು, ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ವಿಟ್ಲಪಡ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರವೀಶ್ ಶೆಟ್ಟಿ ಕರ್ಕಳ, ಕೊಳ್ನಾಡು ತಾ.ಪಂ. ಸದಸ್ಯರಾದ ಕುಲ್ಯಾರು ನಾರಾಯಣ ಶೆಟ್ಟಿ, ವಿಟ್ಲಪಡ್ನೂರು ತಾ.ಪಂ. ಸದಸ್ಯೆ ಶೋಭಾ ರೈ ಎರ್ಮೆನಿಲೆ ಅವರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಕೊಳ್ನಾಡು_ಸಾಲೆತ್ತೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಉದಯ ಕುಮಾರ್ ರೈ ಅಗರಿಯವರಿಗೆ ಸನ್ಮಾನ ನಡೆಯಲಿದೆ.

More from the blog

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಅಪಹರಣ ಮತ್ತು ವಂಚನೆ ಪ್ರಕರಣದ ಆರೋಪಿಯೋರ್ವ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ‌ನಡೆದಿದೆ. ಬಂಟ್ವಾಳ...

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...