Thursday, June 26, 2025

ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ಪುಸ್ತಕ ಗೂಡು’ ಕಾರ್ಯಕ್ರಮಕ್ಕೆ ಚಾಲನೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಪುಸ್ತಕ ಗೂಡು ಎಂಬ ವಿಶೇಷ ಪರಿಕಲ್ಪನೆಯ ಅಡಿಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯತ್ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಡಂತ್ಯಾರು ಪೇಟೆಯ ಮಡಂತ್ಯಾರು ಬಸ್ಸು ತಂಗುದಾಣದಲ್ಲಿ ‘ಪುಸ್ತಕ ಗೂಡು’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯ್ತು. ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶಶಿಪ್ರಭಾ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರು, ಸದಸ್ಯರು, ವರ್ತಕರ ಸಂಘದ ಅಧ್ಯಕ್ಷರಾದ ಜಯಂತ ಶೆಟ್ಟಿ, ರೋಟರಿ ಕ್ಲಬ್ ಮಡಂತ್ಯಾರು ಇದರ ಅಧ್ಯಕ್ಷರಾದ ಕಾಂತಪ್ಪ ಗೌಡ, ಜೆ.ಸಿ.ಐ ಸಂಸ್ಥೆ ಮಡಂತ್ಯಾರು ಇದರ ಅಧ್ಯಕ್ಷರಾದ ಪ್ರಸನ್ನ ಶೆಟ್ಟಿ, ಮಡಂತ್ಯಾರು ಆಟೋ ರಿಕ್ಷಾ ಚಾಲಕ- ಮಾಲಕರ ಸಂಘದ ಅಧ್ಯಕ್ಷರಾದ ವಾಲ್ಟರ್ ಫೆರ್ನಾಂಡಿಸ್ , ಹಾಗೆಯೇ ಆಟೋ ರಿಕ್ಷಾ ಚಾಲಕ- ಮಾಲಕರ ಸಂಘದ ಸದಸ್ಯರು, ಊರಿನ ಗಣ್ಯರು, ಗ್ರಾಮ ಪಂಚಾಯತ್ ನ ಸಿಬ್ಬಂದಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ರೋಟರಿ ಕ್ಲಬ್ ಹಾಗೂ ಜೆ.ಸಿ.ಐ ನ ವತಿಯಿಂದ ಪುಸ್ತಕಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಕಾರಣೀಕರ್ತರಾದರು. ಕಾರ್ಯಕ್ರಮದ ಸ್ವಾಗತವನ್ನು ಗ್ರಾ.ಪಂ ಕಾರ್ಯದರ್ಶಿಯವರಾದ ಮೋರ್ಲಿನ್ ಕ್ರಿಸ್ತಿನ್ ಡಿಸೋಜ ಇವರು ನೆರವೇರಿಸಿದರು. ಗ್ರಾ.ಪಂ ನ ಅಭಿವೃದ್ಧಿ ಅಧಿಕಾರಿಯಾದ  ಪುರುಷೋತ್ತಮ.ಜಿ ಇವರು ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು. ಧನ್ಯವಾದವನ್ನು ಗ್ರಾ.ಪಂ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕಿ ಸರೋಜಿನಿ ಇವರು ನೆರವೇರಿಸಿದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...