Wednesday, January 28, 2026

ಈಶಾವಾಸ್ಯ ಪುರಸ್ಕಾರ, ಪುಸ್ತಕ ಬಿಡುಗಡೆ

ಮಂಗಳೂರು, ಜು. ೧೧: ವೃತ್ತಿ, ಪ್ರವೃತ್ತಿ, ಸಂಸಾರ ಸಮತೋಲನದಲ್ಲಿ ಇರಬೇಕು. ಬರಹಗಳು ಕತ್ತಲಲ್ಲಿ ಬೆಳಕನ್ನು ಬಗೆಯುವ ಕೆಲಸವನ್ನು ಮಾಡುತ್ತವೆ. ಪುಸ್ತಕ ಓದಿದರೆ ಮನಸ್ಸು ಪ್ರಫುಲ್ಲವಾಗುತ್ತದೆ. ಸುಘಾತ ಪುಸ್ತಕ ಲಯವಾದ್ಯದ ಆಳ, ಹರಹು, ಅರ್ಥ ಹಾಗೂ ವಿಷಯ ವ್ಯಾಪ್ತಿಯನ್ನು ಹೆಚ್ಚಾಗಿ ಹೊಂದಿ, ಕಲಾಮೌಲ್ಯವನ್ನು ವೃದ್ಧಿಸಿದೆ. ಹೋಗೋಣ ಜಂಬೂ ಸವಾರಿ ಪುಸ್ತಕ ಸರಳ ನಿರೂಪಣೆಯಿಂದ ಓದಿಸಿಕೊಂಡು ಹೋಗುತ್ತದೆ. ಲಘುಬರಹದಲ್ಲೂ ಜೀವನಪ್ರೀತಿ, ಜೀವನಮೌಲ್ಯಗಳನ್ನು ಇಲ್ಲಿ ಕಾಣಬಹುದು ಎಂದು ಕರ್ಣಾಟಕ ಬ್ಯಾಂಕ್ ಸಿಇಒ ಹಾಗೂ ಎಂಡಿ ಮಹಾಬಲೇಶ್ವರ ಎಂ.ಎಸ್. ಅವರು ಹೇಳಿದರು.

ಅವರು ಜು.೧೦ರ ಸಂಜೆ ವಾಮಂಜೂರಿನ ಪೆರ್ಮಂಕಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಡೆದ , ಆನ್‌ಲೈನ್ ಮೂಲಕ ಪ್ರಸಾರವಾದ , ಉಜಿರೆ ಅಶೋಕ ಭಟ್ಟರಿಗೆ ಈಶಾವಾಸ್ಯ ಪುರಸ್ಕಾರ ನೀಡಿ, ಚೆಂಡೆ ಮದ್ದಳೆಗಳ ನಾದಾನುಸಂಧಾನ ಸುಘಾತ ಹಾಗೂ ಲಲಿತ ಪ್ರಬಂಧಗಳ ಸಂಕಲನ ಹೋಗೋಣ ಜಂಬೂಸವಾರಿ ಪುಸ್ತಕ ಅನಾವರಣಗೊಳಿಸಿ ಮಾತನಾಡಿದರು.

ಯಕ್ಷಗಾನ ಕಲಾವಿದ, ಸಂಘಟಕ ಉಜಿರೆ ಅಶೋಕ ಭಟ್ ಅವರಿಗೆ ಈಶಾವಾಸ್ಯ ಪುರಸ್ಕಾರ ನೀಡಲಾಯಿತು.

ಕರ್ಣಾಟಕ ಬ್ಯಾಂಕ್ ಅಧಿಕಾರಿ, ಲೇಖಕ, ಕಲಾವಿದ ಕೃಷ್ಣಪ್ರಕಾಶ್ ಉಳಿತ್ತಾಯ ಬರೆದ ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಕಾಶಿಸಿದ ಸುಘಾತ ಪುಸ್ತಕ ಹಾಗೂ ಕರ್ಣಾಟಕ ಬ್ಯಾಂಕ್ ಉದ್ಯೋಗಿ, ಲೇಖಕಿ ವಿಭಾ ಕೃಷ್ಣಪ್ರಕಾಶ ಉಳಿತ್ತಾಯ ಬರೆದ, ಸಾಧನಾ ಪ್ರಕಾಶನ ಹೊರತಂದ ಹೋಗೋಣ ಜಂಬೂ ಸವಾರಿ ಪುಸ್ತಕಗಳನ್ನು ಅನಾವರಣಗೊಳಿಸಲಾಯಿತು.

ವಿಮರ್ಶಕ ಡಾ| ಎಂ. ಪ್ರಭಾಕರ ಜೋಷಿ ಅಧ್ಯಕ್ಷತೆ ವಹಿಸಿದ್ದರು.

ಚಿಂತಕ ಲಕ್ಷ್ಮೀಶ ತೋಳ್ಪಾಡಿ ವಿಶೇಷ ಅಭ್ಯಾಗತರಾಗಿದ್ದರು.

ಕೃಷ್ಣಪ್ರಕಾಶ ಉಳಿತ್ತಾಯ ಸ್ವಾಗತಿಸಿ, ವಿಭಾ ಕೃಷ್ಣ ಪ್ರಕಾಶ ಉಳಿತ್ತಾಯ ವಂದಿಸಿದರು. ಪತ್ರಕರ್ತ ಲಕ್ಷ್ಮೀ ಮಚ್ಚಿನ ನಿರ್ವಹಿಸಿದರು.

ಹಿರಿಯ ಕಲಾವಿದರ ಒಗ್ಗೂಡುವಿಕೆಯಲ್ಲಿ ಮಂಗಲ ಸೌಗಂಧಿಕಾ ಯಕ್ಷಗಾನ ತಾಳಮದ್ದಳೆ ನಡೆಯಿತು.

More from the blog

ಕೊರಗ ಸಮುದಾಯದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ತಹಶೀಲ್ದಾರ್ ಭೇಟಿ, ಪ್ರತಿಭಟನೆ ಹಿಂಪಡೆದ ಹೋರಾಟಗಾರರು

ಬಂಟ್ವಾಳ: ಬಂಟ್ವಾಳ ಆಡಳಿತ ಸೌಧದ ಕಚೇರಿ ಮುಂಭಾಗದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ,...

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...