Thursday, February 13, 2025

ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ನ್ಯಾಯಾಲಯ ತಡೆ

ಮಂಗಳೂರು: ಹಿಂದೂ ಜಾಗರಣಾ ವೇದಿಕೆ ಮುಖಂಡರಾದ ದಿನೇಶ್ ಪಂಜಿಗ‌ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೊಟೀಸ್​ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹ ಸಂಯೋಜಕ ದಿನೇಶ್​ ಪಂಜಿಗ ಮತ್ತು ವೇಣೂರು ವಲಯದ ಮುಖಂಡರಾಗಿದ್ದ ಯಶೋಧರ ಎಂಬುವರಿಗೆ, ಕರ್ನಾಟಕ ಪೊಲೀಸ್​ ಕಾಯ್ದೆ ಕಲಂ 55 ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್​ ಠಾಣಾ ವ್ಯಾಪ್ತಿಗೆ ನಿಮ್ಮನ್ನು ಯಾಕೆ ಗಡಿಪಾಟು ಮಾಡಬಾರು ಎಂದು ಕಾರಣ ಕೇಳಿ ಪುತ್ತೂರು ಉಪವಿಭಾಗೀಯ ದಂಡಾಧಿಕಾರಿ ನೋಟಿಸ್​ ಜಾರಿ ಮಾಡಿದ್ದರು. ಹಾಗೆ ನೀವು ಸತ್ವಃ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ಈ ಕುರಿತು ವಾದಿಸಬಹುದು ಎಂದು ಉಪವಿಭಾಗೀಯ ದಂಡಾಧಿಕಾರಿ ನೋಟಿಸ್​ ಪತ್ರದಲ್ಲಿ ತಿಳಿಸಿದ್ದರು.

ನೋಟಿಸ್​ ಜಾರಿ ಮಾಡಿರುವ ಉಪವಿಭಾಗೀಯ ದಂಡಾಧಿಕಾರಿಯ ಕ್ರಮವನ್ನು ಪ್ರಶ್ನಿಸಿ ದಿನೇಶ್ ಪಂಜಿಗ‌ ಹಾಗೂ ಬೆಳ್ತಂಗಡಿಯ ಯಶೋಧರ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಕೀಲ ಮಹೇಶ್ ಕಜೆ ಅವರು ವಾದಿಸಿ, ನೋಟಿಸ್​ ಜಾರಿ ಮಾಡಿದ್ದು ಸರಿಯಿಲ್ಲ ಎಂದು ನ್ಯಾಯಾಲಯದ ಗಮನ ಸೆಳೆದ್ದರು. ಅರ್ಜಿದಾರರ ಪರವಾದ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು ಗಡಿಪಾರು ನೊಟೀಸ್​ಗೆ ತಡೆಯಾಜ್ಞೆ ನೀಡಿದ್ದಾರೆ. ಹಾಗೆ ಆಪಾದಿತರ ವಿರುದ್ಧದ ಎಲ್ಲ ಕಡತಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ

 

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...