Monday, January 26, 2026

ಪಾದರಾಯನಪುರದಲ್ಲಿ ಕ್ವಾರಂಟೈನ್ ಆದ ಶಂಕಿತರಿಂದ ಭಾರೀ ಗಲಾಟೆ

ಬೆಂಗಳೂರಿನ ಪಾದರಾಯನಪುರದಲ್ಲಿ ಪೊಲೀಸ್ ಬ್ಯಾರಿಕೇಟ್ ಕಿತ್ತು ಹಾಕಿ ಧ್ವಂಸ ಮಾಡಿದ ಕಿಡಿಗೇಡಿಗಳು -ನಾವು ಕ್ವಾರಂಟೈನ್ ಒಳ ಪಡಲ್

ಬೆಂಗಳೂರು: ಕೊರೊನಾ ವಾರಿಯರ್ಸ್ ವಿರುದ್ಧ ಪಾದರಾಯನ ಪುರ ನಿವಾಸಿಗಳ ಗಲಾಟೆ ಶುರು ಮಾಡಿದ್ದಾರೆ. ಹೊಂ ಕ್ವಾರಂಟೈನ್ ನಲ್ಲಿರಬೇಕಾದವರನ್ನ ಪತ್ತೆ ಹಚ್ಚಿದ್ದ ಅಧಿಕಾರಿಗಳು ಪಾದರಾಯನಪುರದಲ್ಲಿ 58 ಜನರ ಸೊಂಕಿತ ವ್ಯಕ್ತಿಯ ಸಂಪರ್ಕ ಇತ್ತು. 58 ಜನರನ್ನ ಹೊಂ ಚೆಕಪ್ ಗೆ ಪಡೆಯಲು ತೆರಳಿದ್ದ ಬಿಬಿಎಂಪಿ ಸಿಬ್ಬಂಧಿಗಳು ಮತ್ತು  ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸರು. ಈ ವೇಳೆ 15 ಜನರನ್ನ ಆಸ್ಪತ್ರೆಗೆ ಕಳುಹಿಸಿದ್ದ ಸಿಬ್ಬಂಧಿಗಳು. ಶಾಸಕರು ಬರಲಿ ನೋಡೋಣ ಎಂದು ಗಲಾಟೆ ತಗೆದು ಕಿಡಿಗೇಡಿಗಳು ಕ್ವಾರಂಟೈನ್ ಮಾಡಲು ಅಳವಡಿಸಿದ್ದ ತಗಡುಗಳನ್ನು ಕಿತ್ತು ಹಾಕಿದ್ದಾರೆ. 33 ಜನರನ್ನ ವಶಕ್ಕೆ ಪಡೆಯುವಾಗ ಗಲಾಟೆ ಮಾಡಿದ 100ಕ್ಕೂ ಹೆಚ್ಚು ಮಂದಿ  ಸ್ಥಳೀಯರಿಂದ ಪೊಲೀಸರ ಮೇಲೆಯೇ ಮುಗಿ ಬಿದ್ದಿದ್ದಾರೆ. ಈ ವೇಳೆ ಪೊಲೀಸ್ ಬ್ಯಾರಿಕೇಡ್ ಗಳನ್ನ ಬಿಸಾಡಿ‌ ಗಲಾಟೆ ಮಾಡಿದ್ದಾರೆ.

ಪಾದರಾಯನಪುರ ವಾರ್ಡ್ ನಲ್ಲಿ ಉದ್ವಿಗ್ಞ ಪರಿಸ್ಥಿತಿ ಇದ್ದು, ಎಲ್ಲಾ ಕಡೆ ಬ್ಯಾರಿಕೇಡ್ ಹಾಕಿ ನಿರ್ಭಂಧ ಹೇರಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌ ಹೊರಗಡೆ ಹೋಗೋಕೆ ಆಗ್ತಿಲ್ಲ. ಊಟ ಸಿಗ್ತಿಲ್ಲ ಎಂದು ಆಕ್ರೋಶ ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಪಾದರಾಯನಪುರ ಗುಡ್ಢದಹಳ್ಳಿ ಅರ್ಫತ್ ನಗರದಲ್ಲಿ ಘಟನೆ ನಡೆದಿದೆ. ಪಾದರಾಯನಪುರ ವಾರ್ಡ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

More from the blog

ಮಾಣಿಯಲ್ಲಿ ಹಿಂದೂ ಸಂಗಮ…

ಬಂಟ್ವಾಳ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಪ್ರಯುಕ್ತ ಮಾಣಿ ಪೆರಾಜೆ ಬರಿಮಾರ್ ನೆಟ್ಲ ಮುಡ್ನೂರು, ಅನಂತಾಡಿ ಗ್ರಾಮಗಳನ್ನು ಒಳಗೊಂಡ ಮಾಣಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ನೇರಳಕಟ್ಟೆ ಗಣೇಶ ನಗರದಿಂದ ಬೃಹತ್ ಶೋಭಾಯಾತ್ರೆ...

ಜಕ್ರಿಬೆಟ್ಟು : ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 13.5. ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಗೇಟ್ ಹಾಕಿ ನೀರು...

ಅಮ್ಮುoಜೆ : ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ..

ಬಂಟ್ವಾಳ : ಅಮ್ಮುoಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೊತ್ಸವವು ವಿಜೃಂಭಣೆಯಿಂದ ನಡೆಯಿತು. ಜ.25ರಂದು ಭಾನುವಾರ ಬಲಿ ಉತ್ಸವ ನಡೆಯಿತು. ಶ್ರೀಕ್ಷೇತ್ರ ಪೊಳಲಿಯ ಸುಬ್ರಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದೇವಳದ ಅರ್ಚಕ ನರೇಂದ್ರ ಭಟ್,...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...