Thursday, June 26, 2025

ಬಂಟ್ವಾಳ ಕೊರೊನಾ ಪಾಸಿಟಿವ್ ಮಹಿಳೆ ಮನೆಯ ಕುಟುಂಬಿಕರ ಸಹಿತ 9 ಮಂದಿ ಕ್ವಾರಂಟೈನ್

ಬಂಟ್ವಾಳ: ಬಂಟ್ವಾಳದ ವೃದ್ಧೆ ಮಹಿಳೆಯೋರ್ವರಿಗೆ ಕೊರೊನಾ ಪಾಸಿಟಿವ್ ದೃಢವಾದ ಬಳಿಕ ಅವರ ಕುಟುಂಬಿಕರು ಹಾಗೂ ನೆರೆ ಮನೆಯವರನ್ನು ಸೇರಿಸಿ ಒಟ್ಟು 9 ಮಂದಿಯನ್ನು ಇಂದು ಮಧ್ಯಾಹ್ನ ಕ್ವಾರಂಟೈನ್ ಮಾಡಿದ್ದಾರೆ.

ಪಾಸಿಟಿವ್ ದೃಢವಾದ ವೃದ್ಧೆ ಮಹಿಳೆಯ ಮನೆಯಲ್ಲಿದ್ದ ಇವರ ಗಂಡ, ಮಗಳು ಹಾಗೂ ಮಗಳ ಮಗಳು, ಸಂಬಂಧಿ ಮಹಿಳೆ ಹಾಗೂ ಅವರ ಮಗಳು ಜೊತೆಗೆ ನೆರೆ ಮನೆಯ ನಾಲ್ವರನ್ನು ಒಟ್ಟು ಒಂಬತ್ತು ಮಂದಿಯನ್ನು ಕೊರಂಟೈನ್ ಮಾಡಿದ್ದಾರೆ.

ಕೊರೊನಾ ಪಾಸಿಟಿವ್ ದೃಢ ಮಹಿಳೆಯ ಜೊತೆ ತೆರಳಿದ ಇವರ ಮಗನನ್ನು ಆದಿತ್ಯವಾರವೇ ಕ್ವಾರಂಟೈನ್ ಮಾಡಲಾಗಿತ್ತು.
ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಮಹಿಳೆಯನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ಶನಿವಾರ ಎ.18 ರಂದು ದಾಖಲಿಸಲಾಗಿತ್ತು.
ಆದಿತ್ಯವಾರ ಮೃತಪಟ್ಟ ಮಹಿಳೆಯನ್ನು ದಾಖಲಿಸಿದ ಸುಮಾರು ಎರಡು ತಾಸು ಬಳಿಕ ಇವರನ್ನು ದಾಖಲಿಸಲಾಗಿತ್ತು. ಅದಕ್ಕೂ ಮೊದಲು ಇವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ 108 ಅಂಬ್ಯುಲೆನ್ಸ್ ಮೂಲಕ ಕರೆದುಕೊಂಡು ಹೋಗಲಾಗಿತ್ತು.
ಇಂದು ಕೊರೊನಾ ಪಾಸಿಟಿವ್ ದೃಢವಾದ ಮಹಿಳೆ ಆದಿತ್ಯವಾರ ಮೃತಪಟ್ಟ ಮಹಿಳೆಯ ನೆರೆಮನೆಯವರಾಗಿದ್ದಾರೆ.
ಆದಿತ್ಯವಾರ ಮೃತಪಟ್ಟ ಮಹಿಳೆ ಹಾಗೂ ಇಂದು ಕೊರೊನಾ ಪಾಸಿಟಿವ್ ದೃಡವಾದ ಮಹಿಳೆಯ ಟ್ರಾವೆಲ್ ಹಿಸ್ಟರಿಯನ್ನು ಸಂಬಂಧಿಸಿದ ಇಲಾಖೆ ತೆಗೆಯುತ್ತಿದೆ.
ಸದ್ಯ ಬಂಟ್ವಾಳ ಪೇಟೆ ಅಂದರೆ ಈ ಎರಡು ಮನೆಯ ಸುತ್ತಮುತ್ತಲಿನ 100 ಮೀ. ವ್ಯಾಪ್ತಿಯನ್ನು ಕಂಟೈನ್ ಮೆಂಟ್ ಏರಿಯಾ ಎಂದು ಗುರುತಿಸಿ ಆದಿತ್ಯವಾರವೇ ಸೀಲ್ ಡೌನ ಮಾಡಲಾಗಿದೆ.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...