ಬಂಟ್ವಾಳ: ಮೂಲಭೂತ ಸೌಕರ್ಯಗಳ ಬೆಲೆ ಏರಿಕೆಯ ವಿರುದ್ದ ಪಕ್ಷಾತೀತವಾಗಿ ವಿರೋಧ ವ್ಯಕ್ತಪಡಿಸಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮನವಿ ಮಾಡಿದ್ದಾರೆ.
ಕೊರೊನಾ ಸಂಕಷ್ಟದ ದಿನಗಳಲ್ಲಿ ದಿನಬಳಕೆಯ ವಸ್ತುಗಳ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದ ಜನರು ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಕಡಿಮೆಯಾಗಿದ್ದರೂ ಕೂಡಾ ಭಾರತದಲ್ಲಿ ಮಾತ್ರ ಬೆಲೆ ಕಡಿಮೆಯಾಗಿಲ್ಲ. ಇದು ಮೋದಿಯವರನ್ನು ಬಿಟ್ಟು ಉಳಿದವರಿಗೆಲ್ಲಾ ತೊಂದರೆಯಾಗಿದೆ ಎಂದು ಅವರು ಕೇಂದ್ರ ಸರಕಾರದ ವಿರುದ್ದ ಆರೋಪ ವ್ಯಕ್ತಪಡಿಸಿದ್ದಾರೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರ ಯಾವತ್ತೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಮಾಡಿಲ್ಲ.
ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಮಾಡಿದಾಗ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಅಗುತ್ತದೆ. ಇದು ಸಾರ್ವಜನಿಕರ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಸರಕಾರ ಬಡವರ ಬಗ್ಗೆ ಅರ್ಥ ಮಾಡಿಕೊಳ್ಳಲು ಅವರು ಮನವಿ ಮಾಡಿದ್ದಾರೆ.
ಕೊರೊನಾ ಅವಧಿಯಾಗಿರುವುದರಿಂದ ಪ್ರತಿಭಟನೆ ಮಾಡುವುದು ಅಸಾಧ್ಯ, ಆದರೂ ಅಯಾಯಾ ವ್ಯಾಪ್ತಿಯಲ್ಲಿ ಬೆಲೆ ಏರಿಕೆಯ ವಿರುದ್ಧ ಧ್ವನಿಎತ್ತಬೇಕಾಗಿದೆ. ವಿರೋಧ ವ್ಯಕ್ತಪಡಿಸಿ ಎಂದು ಅವರು ಕರೆ ನೀಡಿದ್ದಾರೆ.

