ಬಂಟ್ವಾಳ: ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕೋರೋನಾ ಭ್ರಷ್ಟಾಚಾರದ ಬಗ್ಗೆ ಪತ್ರಿಕಗೋಷ್ಠಿ ನಡೆಯಿತು.



ಕೊರೊನಾ ಹೆಸರಿನಲ್ಲಿ ಸರಕಾರ ಭ್ರಷ್ಟಾಚಾರ ನಡೆಸಿದೆ, ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕಾಗಿದೆ ಎಂದು ಅವರು ಒತ್ತಾಯಿಸಿದ್ದಾರೆ.

ಸರಕಾರ ಈ ಭ್ರಷ್ಟಾಚಾರದ ಬಗ್ಗೆ ನ್ಯಾಯಾಂಗ ತನಿಖೆಯಾಗದಿದ್ದಲ್ಲಿ ಕಾಂಗ್ರೆಸ್ ಪಕ್ಷ ದ ನೇತ್ರತ್ವದಲ್ಲಿ ಇದರ ವಿರುದ್ದ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.












