Thursday, February 13, 2025

ಬಂಟ್ವಾಳಕ್ಕೆ ಸೆಂಟ್ರಲ್ ರೋಡ್ ಫಂಡ್ ಯೋಜನೆಯಲ್ಲಿ ೮ ಕಾಮಗಾರಿಗಳು ತನ್ನ ಅವಧಿಯಲ್ಲೇ ಮಂಜೂರಾಗಿವೆ :ರಮಾನಾಥ ರೈ

ಬಂಟ್ವಾಳ:
ಬಂಟ್ವಾಳಕ್ಕೆ ಸೆಂಟ್ರಲ್ ರೋಡ್ ಫಂಡ್ ಯೋಜನೆಯಲ್ಲಿ ೮ ಕಾಮಗಾರಿಗಳು ತನ್ನ ಅವಧಿಯಲ್ಲೇ ಮಂಜೂರಾಗಿವೆ ಎಂದು
ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಬಿ.ಸಿ.ರೋಡ್‌ನಲ್ಲಿರುವ ಪಾಣೆಮಂಗಳೂರು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಇವೆಲ್ಲ ಕಾಮಗಾರಿಗಳು ಚುನಾವಣೆಯ ಸಂದರ್ಭದಲ್ಲಿ ಮಂಜೂರಾತಿ ಆಗಿವೆ.
ಇದರ ಫಾಲೋಅಪ್ ಮಾಡುವ ಮೂಲಕ ಕಾಮಗಾರಿ ಪೂರ್ಣಗೊಳ್ಳುವಂತೆ
ಮಾಡುತ್ತಿದ್ದೇನೆ ಎಂದರು.

ಇದೀಗ ತಿಳಿಸಿದಾಗೆ
ಒಟ್ಟು ೮ ಕಾಮಗಾರಿಗಳಲ್ಲಿ ಮೊದಲ ಹಂತದಲ್ಲಿ ೬ ಕಾಮಗಾರಿಗಳು ನಡೆಯುತ್ತಿವೆ, ನಂತ ಮಂಜೂರಾತಿ ಆದ ೨ ಕಾಮಗಾರಿಗಳು ಎಂದು ಮಾಹಿತಿ ನೀಡಿದ್ದಾರೆ.
ಅದೇ ರೀತಿ ಕ್ರೀಡಾಂಗಣ, ಒಳಚರಂಡಿ ಯೋಜನೆಗೆ ಮಂಜೂರಾತಿ ಆಗಿದ್ದು, ಶೀಘ್ರ ಅನುಷ್ಠಾನವಾಗಲಿದೆ. ಇದೀಗ ಬಾಕಿಯಿರುವ ರಸ್ತೆ ಕಾಮಗಾರಿಗಳ ಅನುದಾನದ ಬಿಡುಗಡೆಗೆ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಪತ್ರವನ್ನು ಬರೆಯಲಾಗಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾವೆ,
ಅಬ್ಬಾಸ್ ಆಲಿ, ಸದಾಶಿವ ಬಂಗೇರ,
ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್ ಇದ್ದರು

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...