Saturday, July 12, 2025

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಬಿಸಿರೋಡಿನಲ್ಲಿ ಕೃತಕ ನೆರೆ ?

ಬಂಟ್ವಾಳ: ಶನಿವಾರ ಸುರಿದ ಬಾರಿ ಮಳೆಗೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ಮಳೆ ನೀರು ಹರಿದು ಹೋಗುವ ದೃಶ್ಯ ಪುರಸಭಾ ವ್ಯಾಪ್ತಿಯ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೈಕಂಬ ಬಿಸಿರೋಡು ಮಧ್ಯೆ ಇರುವ ಪೆಟ್ರೋಲ್ ಪಂಪ್ ಒಂದರ ಮುಂಭಾಗದಲ್ಲಿ ಕಂಡು ಬಂದಿದೆ.
ಶನಿವಾರ (ಇಂದು) ರಾತ್ರಿ ಸುಮಾರು 8 ಗಂಟೆಯಿಂದ ಅರ್ಧ ತಾಸುಗಳ ಕಾಲ ಎಡೆಬಿಡದೆ ಸುರಿದ ಬಾರೀ ಮಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು ರಸ್ತೆಯಲ್ಲಿ ಮಳೆ ನೀರು ಹರಿದು ಸಾಧ್ಯ ವಾಗದೆ ಕೃತಕ ನೆರೆಯಿಂದ ವಾಹನ ಸವಾರರಿಗೆ ತೊಂದರೆ ಯಾಯಿತು.

ಮಳೆ ನೀರು ಸರಾಗವಾಗಿ ಹರಿದುಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಯನ್ನು ಸಂಬಂಧಿಸಿದ ಇಲಾಖೆ ಮಾಡದೆ ಇರುವ ಕಾರಣ ನೀರು ರಸ್ತೆ ತುಂಬಾ ತುಂಬಿ ಕೃತಕ ತೋಡಾಗಿ ಮಾರ್ಪಾಡು ಆಗಿತ್ತು.
ರಾತ್ರಿ ವೇಳೆ ಆಗಿದ್ದರಿಂದ ನೀರಿನ ಮಟ್ಟ ಸರಿಯಾಗಿ ಅಂದಾಜಿಸಲಾಗದೆ ದ್ವೀಚಕ್ರವಾಹನ ಸವಾರರಂತೂ ಸರ್ಕಸ್ ಮಾಡುತ್ತಾ ಚಾಲನೆ ಮಾಡಿ ದಡ ಸೇರುವ ಪ್ರಸಂಗ ಕೂಡ ನಡೆಯಿತು.
ಬಿಸಿರೋಡಿನಿಂದ ಪರಂಗಿಪೇಟೆ ವರೆಗೂ ಇದೇ ರೀತಿಯಲ್ಲಿ ರಸ್ತೆಯಲ್ಲಿ ನೀರು ತುಂಬಿಕೊಂಡು ವಾಹನ ಸವಾರರಿಗೆ ಚಾಲನೆ ಮಾಡುವುದೇ ಸಾಹಸದ‌ಕೆಲಸವಾಗಿದೆ.
ರಾಷ್ಟ್ರೀಯ ಹೆದ್ದಾರಿ ಬದಿಯ ಚರಂಡಿಯ ಸರಿಯಾಗಿ ಹೂಳೆತ್ತುವ ಕಾರ್ಯ ನಡೆಯದೇ ಇರುವುದೇ ಇಂತಹ ಎಡವಟ್ಟುಗಳಿಗೆ ಅವಕಾಶ ವಾಗಿದೆ ಎಂದು ಸಾರ್ವಜನಿಕ ವಲಯದ ಮಾತು.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...