Friday, July 4, 2025

Bantwal Rain Damage: ಅನೇಕ ಮನೆಗಳಿಗೆ ಹಾನಿ

ಬಂಟ್ವಾಳ: ಜುಲೈ 3 ರಂದು ರಾತ್ರಿ ಸುರಿದ ಮಳೆಗೆ ತಾಲೂಕಿನ ಅನೇಕ ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಲಕ್ಷಾಂತರ ರೂ‌ ನಷ್ಟ ಸಂಭವಿಸಿದೆ. ನೆಟ್ಲ ಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಏಮಾಜೆ ಭಜನಾ ಮಂದಿರ ಬಳಿಯ ದೇವಪ್ಪ ಯುವರ ಮನೆಯ ಬದಿಗೆ ತೆಂಗಿನ ಬಿದ್ದಿರುತ್ತದೆ.
ಅಳಿಕೆ ಸರೋಜಿನಿ ಬೆಲ್ಚಾಡ ವಾಸ್ತ್ಯವ್ಯದ ಮನೆಗೆ ಹಾನಿಯಾಗಿದ್ದು ಯಾವುದೇ ಪ್ರಾಣಹಾನಿಯಾಗಿಲ್ಲ,
ಇಡ್ಕಿದು ಗ್ರಾಮದ ವಡ್ಯರ್ಪೆ ಎಂಬಲ್ಲಿ ನೆಬಿಸ ಎಂಬುವವರ ವಾಸ್ತವ್ಯದ ಮನೆಗೆ‌ ಹಾನಿ,
ತೆಂಕ ಬೆಳ್ಳೂರು ಗ್ರಾಮದ ಕುಸುಮರವರ ವಾಸ್ತವ್ಯದ ಮನೆ ಗೋಡೆ ಅಲ್ಲಲ್ಲಿ ಬಿರುಕು ಬಿದ್ದಿರುತ್ತದೆ.
ವಿಟ್ಲ ಕಸಬಾ ಗ್ರಾಮದ ಕೊಳಂಬೆ ಎಂಬಲ್ಲಿ, ಬೀಪಾತಿಮ ಎಂಬವರ ಮನೆಯ ಹಂಚು ಛಾವಣಿಗೆ ಹಾನಿ,
ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಜನತಾ ಕಾಲೊನಿ ಎಂಬಲ್ಲಿ, ಗೀತ ಎಂಬವರ ಮನೆಯ ಹಿಂಬದಿ ತಡೆಗೋಡೆ ಕುಸಿದು ಬಿದ್ದು, ಕೆಳಭಾಗದಲ್ಲಿರುವ ಸೀತ ಎಂಬವರ ಮನೆಯ ಸಿಮೆಂಟ್ ಶೀಟುಗಳು ಹಾನಿಯಾಗಿರುತ್ತದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಕಂದಾಯ ಇಲಾಖೆ ತಿಳಿಸಿದೆ.

More from the blog

Rural station: ಮೇಯಲು ಬಿಟ್ಟ ಕರುಗಳ ಕಳವು, ಸಿ.ಸಿ.ಟಿ.ವಿಯಲ್ಲಿ ದೃಶ್ಯ ಸೆರೆ

ಬಂಟ್ವಾಳ: ಮೇಯಲು ಹೋಗಿದ್ದ ಕರುಗಳು ನಾಪತ್ತೆ, ಕರುಗಳನ್ನು ಕಾರಿನಲ್ಲಿ ತುಂಬಿಸಿಕೊಂಡು ಕದ್ದುಕೊಂಡುವ ಹೋಗುವ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು,ಮಾಲೀಕರಿಗೆ ದೊರಕಿದ್ದು, ಇದೀಗ ಕರುಗಳನ್ನು ಪತ್ತೆ ಮಾಡಿಕೊಡಿ ಎಂದು ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ದೂರು ನೀಡಿದ...

B. C. ROAD : ಜು.19ರಿಂದ 27ರವರೆಗೆ ಭಾರತ ದರ್ಶನ ಯಕ್ಷಗಾನ ತಾಳಮದ್ದಳೆ ನವಾಹ..

ಬಂಟ್ವಾಳ : ಬಿ.ಸಿ.ರೋಡಿನ ತುಳು ಶಿವಳ್ಳಿ ಸಭಾಭವನದಲ್ಲಿ ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ಅವರಿಂದ ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ತಾಲೂಕು ಸಹಭಾಗಿತ್ವದಲ್ಲಿ ಭಾರತ ದರ್ಶನ ಎಂಬ ಯಕ್ಷಗಾನ ತಾಳಮದ್ದಳೆ...

ಬ್ರೋಕರ್ ಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ: ಬೇಬಿ ಕುಂದರ್….

ಬಂಟ್ವಾಳ : ಬ್ರೋಕರ್ ಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಜನರ ಸಮಸ್ಯೆ ಪರಿಹಾರ ಮಾಡುತ್ತೇನೆ, ಭ್ರಷ್ಟಾಚಾರ ರಹಿತ ಕೆಲಸಕ್ಕೆ ಒತ್ತು ನೀಡುವುದಾಗಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ‌ಕುಂದರ್ ತಿಳಿಸಿದ್ದಾರೆ. ನಗರ ಯೋಜನಾ ಪ್ರಾಧಿಕಾರದ...

ದ. ಕ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ಫೋರ್ಸ್ ರಚನೆ – ಸಿಎಂಗೆ ಬಿ. ರಮಾನಾಥ ರೈ ಅಭಿನಂದನೆ..

ಬೆಂಗಳೂರು :  ದ.ಕ.ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಸರಣಿ ಕೊಲೆಗಳು ಮತೀಯ ಸಂಘರ್ಷಣೆಗಳನ್ನು ಮಟ್ಟ ಹಾಕುವ ಸಲುವಾಗಿ ಕರ್ನಾಟಕ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ದ.ಕ.ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್...