Thursday, July 10, 2025

ವಿಟ್ಲ: ಲಯನ್ಸ್‌ನಿಂದ ಪೌರಕಾರ್‍ಮಿಕರಿಗೆ ರೈನ್‌ಕೋಟ್ ವಿತರಣೆ

ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಸ್ವಚ್ಛ ಭಾರತ ಅಂಗವಾಗಿ ಪಂಚಾಯಿತಿ ಪೌರಕಾರ್‍ ಮಿಕರಿಗೆ ರೈನ್ ಕೋಟ್‌ಗಳನ್ನು ವಿತರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಂತ ನಾಯಕ್ ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಲಯನ್ಸ್ ಅಧ್ಯಕ್ಷ ಸಂತೋಷ ಕುಮಾರ್ ಶೆಟ್ಟಿ ಮಾತನಾಡಿ ಸ್ವಚ್ಛ ಭಾರತ ಅಡಿಯಲ್ಲಿ ಇನ್ನೂ ಹಲವಾರು ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಕಾರ್‍ಯದರ್ಶಿ ಮನೋಜ್ ಕುಮಾರ ರೈ, ಕೋಶಾಧಿಕಾರಿ ಮಹಮ್ಮದ್ ಖಲಂದರ್, ವಿಟ್ಲ ಮಂಗೇಶ ಭಟ್, ಲಯನ್ ಟೇಮರ್ ರವಿಶಂಕರ್, ಸ್ಥಾಯಿಸಮಿತಿ ಅಧ್ಯಕ್ಷ ರವಿಪ್ರಕಾಶ್ ಹಾಗೂ ಪಂಚಾಯಿತಿ ಇತರ ಸದಸ್ಯರು ಉಪಸ್ಥಿತರಿದ್ದರು.
ನಿಕಟಪೂರ್ವ ಪಟ್ಟಣ ಪಂಚಾಯತಿ ಅಧ್ಯಕ್ಷ ಅರುಣ ಎಂ. ವಂದಿಸಿದರು. ಪಟ್ಟಣ ಪಂಚಾಯಿತಿ ಸದಸ್ಯ ವಿ.ರಾಮದಾಸ ಶೆಣೈ ಸ್ವಾಗತಿಸಿದರು.

 

More from the blog

ಕೆಂಪುಕಲ್ಲು, ಮರಳಿನ ಅಭಾವದಿಂದ ಕಾರ್ಮಿಕರಿಗೆ ತೊಂದರೆ : ಸಮಸ್ಯೆ ಬಗೆಹರಿಸಲು ಬಿ.ಎಂ.ಎಸ್ ಮನವಿ 

ಬಂಟ್ವಾಳ: ರಾಜ್ಯ ಸರಕಾರವು ಸ್ಪಷ್ಟ ಕಾನೂನು ರೂಪಿಸದ ಪರಿಣಾಮ ಪ್ರಸ್ತುತ ಕೆಂಪುಕಲ್ಲು, ಮರಳಿನ ಅಭಾವದಿಂದ ಕಾರ್ಮಿಕರಿಗೆ ಕೆಲಸವಿಲ್ಲದೆ ಕುಟುಂಬ ಪೋಷಣೆ ಕಷ್ಟವಾಗಿದೆ. ಸಾಲದ ಕಂತು ಪಾವತಿಸುವುದು ಕೂಡ ಸವಾಲಾಗಿದ್ದು, ಶಾಲಾರಂಭದಲ್ಲೇ ಇಂತಹ ಸಮಸ್ಯೆಯಿಂದ...

Women missing : ವಿವಾಹಿತ ಮಹಿಳೆ ನಾಪತ್ತೆ – ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲು

ಬಂಟ್ವಾಳ: ಬಿಸಿರೋಡಿನ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮದ ಅಚ್ಚರಕಟ್ಟೆ ನಿವಾಸಿ ವಸಂತ ನಾಗಣ್ಣ...

Government Hospital : ಸರಕಾರಿ ಆಸ್ಪತ್ರೆಯ ಆವರಣದೊಳಗೆ ಅನಧಿಕೃತವಾಗಿ ವಾಹನಗಳ ಪಾರ್ಕ್ – ರೋಗಿಗಳಿಗೆ ತೊಂದರೆ..

ಬಂಟ್ವಾಳ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಅವರಣದ ಒಳಗೆ ರಿಕ್ಷಾ ಸಹಿತ ಇತರೆ ವಾಹನಗಳನ್ನು ‌ಅನಧಿಕೃತವಾಗಿ ಪಾರ್ಕ್ ಮಾಡಲಾಗಿ ಹೋಗುತ್ತಾರೆ, ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳ ಸಹಿತ ಅಂಬ್ಯುಲೆನ್ಸ್ ವಾಹನಗಳಿಗೆ ಸಂಚಾರಕ್ಕೆ ತೊಡಕುಂಟಾಗಿದೆ ಎಂಬ‌...

ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ, ಹಲ್ಲೆ: ಎರಡು ಪ್ರಕರಣ ದಾಖಲು..

ಬಂಟ್ವಾಳ: ಪಿಕಪ್ ವಾಹನದಲ್ಲಿ ಕೂಡಿ ಹಾಕಿ ಸುಮಾರು ಐದು ಜಾನುವಾರುಗಳನ್ನು ಸಾಗಾಟ ಮಾಡಿದ ಪರಿಣಾಮ ಕರು ಸತ್ತಿದೆ ಎಂಬ ಆರೋಪದ ಮೇಲೆ ಹಾಗೂ ಜಾನುವಾರು ಸಾಗಾಟ ಮಾಡಿದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಲಾಗಿದೆ...