ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ವಿಟ್ಲ ರೈತ ಹೋರಾಟ ಸಂಘ ನೇತೃತ್ವದಲ್ಲಿ 400 ಕೆ.ವಿ. ಉಡುಪಿ – ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗ ವಿರೋಧಿಸಿ ಮಂಗಳವಾರ ವಿಟ್ಲ ಜೈನ ಬಸದಿಯಿಂದ ನಾಡಕಛೇರಿ ಚಲೋ ಸತ್ಯಾಗ್ರಹ ನಡೆಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್. ಪಿ. ಚಂಗಪ್ಪ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ಕುಪ್ಪೆಪದವು, ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು, ವಿಟ್ಲ ರೈತ ಹೋರಾಟ ಸಮಿತಿ ಅಧ್ಯಕ್ಷ ರಾಜೀವ ಗೌಡ ಮತ್ತಿತರರು ಜಾಥಾದಲ್ಲಿ ಭಾಗವಹಿಸಿದ್ದರು. ವಿಟ್ಲ ನಾಡಕಛೇರಿ ಮುಂಭಾಗದಲ್ಲಿ ನೂರಾರು ಮಂದಿ ರೈತರು ಸತ್ಯಾಗ್ರಹ ನಡೆಸುತ್ತಿದ್ದಾರೆ. ಉನ್ನತ ಮಟ್ಟದ ಅಧಿಕಾರಿಗಳು ಬರುವ ತನಕ ಪ್ರತಿಭಟನೆ ಮುಂದುವರಿಯಲಿದೆ.

