Thursday, February 13, 2025

ಜಾತಿ ಧರ್ಮದ ಹೆಸರಿನಲ್ಲಿ ಕಾಂಗ್ರೇಸ್ ದೇಶ ವಿಭಜನೆ ಮಾಡಿದೆ: ರಾಜನಾಥ್ ಸಿಂಗ್

ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಹೋಗಿದ್ದು ಕಾಂಗ್ರೆಸ್ : ರಾಜನಾಥ್ ಸಿಂಗ್
ಬಂಟ್ವಾಳ : ಧರ್ಮದ , ಜಾತಿಯ ಹೆಸರಿನಲ್ಲಿ ದೇಶವನ್ನು ವಿಭಜನೆ ಮಾಡಲು ಹೋಗಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ.
ಬಿಜೆಪಿ ದೇಶದ ರಕ್ಷಣೆಗೊಸ್ಕರ ಕೆಲಸ ಮಾಡುತ್ತಿದೆ. ಅದನ್ನು ಸಹಿಸದ ಕಾಂಗ್ರೇಸ್ ಬೇರೆ ಬೇರೆ ವಿಚಾರಗಳ ಮೂಲಕ ಬಿಜೆಪಿ ಮೇಲೆ ಸವಾರಿ ಮಾಡುವ ವಿಫಲ ಪ್ರಯತ್ನ ಮಾಡುತ್ತಿದೆ ಹೊರತು ಅದರಲ್ಲಿ ಸಫಲತೆ ಕಂಡಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಅವರು ಇಂದು ಸಂಜೆ ಮಂಗಳೂರಿನ ಬಂಗ್ರಕೂಳೂರಿನಲ್ಲಿ ನಡೆದ ಸಿಎಎ ಪರವಾದ ಬಿಜೆಪಿ ಜನಜಾಗೃತಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.

ಒಂದು ದೇಶದಲ್ಲಿ ಎರಡು ಸಂವಿಧಾನ, ಎರಡು ಧ್ವಜ ಇರಬಾರದು ಎಂಬ ಅನೇಕರ ಕನಸು, ಈ ಕನಸಿಗೆ ಜೀವ ತುಂಬುವ ಕೆಲಸ ಬಿಜೆಪಿ ಮಾಡುತ್ತಿದೆ.
ಭಾರತಕ್ಕೆ ಇರುವುದು ಒಂದೇ ತ್ರಿವರ್ಣ ಧ್ವಜ. ಪೌರತ್ವ ತಿದ್ದುಪಡಿ ಕಾಯ್ದೆ ಮಹಾತ್ಮ ಗಾಂಧಿ ಕನಸಾಗಿತ್ತು. ಗಾಂಧಿ ಕನಸನ್ನು ಬಿಜೆಪಿ ಪೂರೈಸಿದೆ ಎಂಬ ತೃಪ್ತಿ ಎಲ್ಲರಲ್ಲಿಯೂ ಇದೆ ಅವರು ಹೇಳಿದರು. ‌

ಕಳೆದ ಬಾರಿಯ ನಮ್ಮ ಅಜೆಂಡಾದಲ್ಲಿ ಏನೇನೂ ಭರವಸೆಗಳನ್ನು ನೀಡಿದ್ದೇವೆ ಅದೆಲ್ಲವನ್ನು ಪ್ರಾಮಾಣಿಕ ವಾಗಿ ಈಡೇರಿಸಿದ್ದೇವೆ. ರಾಮಮಂದಿರ ನಿರ್ಮಾಣ, ಜಮ್ಮು ಕಾಶ್ಮೀರದ 370 ವಿಧಿ ರದ್ದತಿ ಮಾಡಿದ್ದೇವೆ. ಶೀಘ್ರವೇ ಅಯೋಧ್ಯೆಯಲ್ಲಿ ರಾಮಂದಿರ ನಿರ್ಮಿಸಲಿದ್ದೇವೆ, ರಾಮಮಂದಿರ ನಿರ್ಮಾಣದ ಮೂಲಕ ನಿಮಗೆಲ್ಲರಿಗೂ ಪೂಜೆ ಮಾಡುವ ಅವಕಾಶವಿದೆ ಎಂದವರು ಹೇಳಿದರು.
ಸ್ವಾತಂತ್ರ್ಯ ಬಂದ ಬಳಿಕವೂ
ತಲಾಖ್ ಮೂಲಕ ಮುಸ್ಲಿಂ ಹೆಣ್ಮಕ್ಕಳು ತೊಂದರೆ ಅನುಭವಿಸುತ್ತಿದ್ದರು.
ಆದರೆ ಮೋದಿಯವರು ಪ್ರಧಾನಮಂತ್ರಿಯಾದ ಬಿಜೆಪಿ ಆಡಳಿತದ ಪಕ್ಷ ಅಧಿಕಾರಕ್ಕೆ ಬಂದ ನಂತರ ತ್ರಿವಳಿ ತಲಾಖ್ ರದ್ದು ಮಾಡಿದ್ದೇವೆ ಎಂದು ಹೇಳಲು ಹೆಮ್ಮೆಯಾಗುತ್ತಿದೆ ಎಂದರು.

ಎನ್‌ಪಿಆರ್ ನಿಂದ ಏನು ತೊಂದರೆ ಇದೆ..? ದೇಶದ ಜನರ ಬಗ್ಗೆ ಲೆಕ್ಕ ಇಟ್ಟುಕೊಳ್ಳಬಾರದೇ..? ಎನ್‌ಆರ್‌ಸಿ ಬಗ್ಗೆ ಇವಾಗ ಏನೂ ಚರ್ಚೆಯಾಗಿಲ್ಲ. ಆದರೆ ದೇಶದ ಮುಸ್ಲಿಮರಲ್ಲಿ ಭಯ ಮೂಡಿಸಲಾಗುತ್ತಿದೆ. ಭಾರತದ ಮುಸ್ಲಿಮರಿಗೆ ಯಾರೂ ಏನೂ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಮುಸ್ಲಿಮರೇ ಕೇಂದ್ರ ಸರ್ಕಾರ ನಿಮಗೆ ರಕ್ಷಣೆ ನೀಡುತ್ತದೆ. ನಮ್ಮದು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಆಗಿದೆ. ಪೌರತ್ವ ಕಾಯ್ದೆಯಿಂದ ದೇಶದ ಜನರಿಗೆ ಏನೂ ತೊಂದರೆ ಆಗುವುದಿಲ್ಲ ಎಂದರು.
ಯಾರು ಭಯಪಡುವ ಅಗತ್ಯವಿಲ್ಲ.
ಮತಬ್ಯಾಂಕ್ ರಾಜಕೀಯ ನಡೆಯುತ್ತಿದ್ದು ಜನರು ಅರ್ಥಮಾಡಿಕೊಳ್ಳಲು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲು , ಶೋಭಾ ಕರಂದ್ಲಾಜೆ, ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಶಾಸಕ ರಾದ ಎಸ್ ಅಂಗಾರ, ವೇದವ್ಯಾಸ ಕಾಮತ್, ಸಂಜೀವ ಮಠಂದೂರು, ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಡಾ! ಭರತ್ ಶೆಟ್ಟಿ, ಉಮನಾಥ ಕೋಟ್ಯಾನ್, ಹರೀಶ್ ಪೂಂಜಾ ಮತ್ತಿತರ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...