*ಭಾರಿ ಮಳೆ: ನಾಳೆ (ಆ.7) ಶಾಲಾ ಕಾಲೇಜುಗಳಿಗೆ ರಜೆ*
ಮಂಗಳೂರು:ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿವರೆಗೆ) (ಆ.7)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು, ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ತೆರಳುವಂತಿಲ್ಲ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
