Wednesday, July 9, 2025

ಯಕ್ಷಗಾನ ಕಲಾವಿದರಿಗೆ ಶಾಸಕರಿಂದ ಕಿಟ್ ವಿತರಣೆ

ಬಂಟ್ವಾಳ: ಲಾಕ್ ಡೌನ್ ನಿಂದ ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವನ ಮಾಡುವ ಯಕ್ಷಗಾನ ಕಲಾವಿದರಿಗೆ ಶನಿವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕಚೇರಿಯಲ್ಲಿ ಕಿಟ್ ವಿತರಿಸಿದರು.

ಬಳಿಕ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಯಕ್ಷಗಾನ ಕಲಾವಿದರು ಸಂಕಷ್ಟದಲ್ಲಿದ್ದು, ಮಳೆಗಾಲದಲ್ಲಿ ಅವರಿಗೆ ನೆರವು ನೀಡುವುದು ಶ್ಲಾಘನೀಯ ಕಾರ್ಯ. ಈ ನಿಟ್ಟಿನಲ್ಲಿ ಕಲಾವಿದರಾಗಿ ಸಾಮಾಜಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಸರಪಾಡಿ ಅಶೋಕ್ ಶೆಟ್ಟಿ ಅವರ ಪ್ರಯತ್ನ ಪ್ರಶಂಸನೀಯ ಎಂದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಕಮಲಾಕ್ಷಿ ಪೂಜಾರಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಉಪಾಧ್ಯಕ್ಷ ರೋನಾಲ್ಡ್ ಡಿಸೋಜಾ ಉಪಸ್ಥಿತರಿದ್ದರು.


ಮಾ.17 ರಂದು ಯಕ್ಷಗಾನ ಕಲಾವಿದರು ಕಾಲಿಗೆ ಕಟ್ಟಿದ್ದ
ಗೆಜ್ಜೆಯನ್ನು ಬಿಚ್ಚಿ ಕೆಳಗಿಟ್ಟವರಿಗೆ ಮತ್ತೆ ಯಕ್ಷಗಾನದ ರಂಗಪ್ರವೇಶ ಮಾಡಲು ಕೋವಿಡ್ 19ನಿಂದ ಅಸಾಧ್ಯ ಪರಿಸ್ಥಿತಿ ಉಂಟಾಯಿತು.
500 ಮಿಕ್ಕಿ ಯಕ್ಷಗಾನ ಕಲಾವಿದ್ದು, ಅದರಲ್ಲಿ ಆರ್ಥಿಕವಾಗಿ ತೀರ ಸಂಕಷ್ಟದಲ್ಲಿರುವ ಕಲಾವಿದರನ್ನು ಗುರುತಿಸಿ ಅವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಅವರ ಸಹಕಾರ ಹಾಗೂ ಹಿರಿಯ ಕಲಾವಿದ ಆಶೋಕ್ ಶೆಟ್ಟಿ ಸರಪಾಡಿ ಅವರ ನೇತ್ರತ್ವದಲ್ಲಿ ವಳಚ್ಚಿಲ್ ಖಾದರ್ , ರಂಗೋಲಿ ಸದಾನಂದ ಶೆಟ್ಟಿ, ರಾಮ್ ದಾಸ್ ಬಂಟ್ವಾಳ, ಡಾ.ಬಾಲಚಂದ್ರ ಶೆಟ್ಟಿ, ಖಾದರ್ ಇಕ್ರಾ, ದೇವದಾಸ್ ಶೆಟ್ಟಿ ಬಂಟ್ವಾಳ, ನಟರಾಜ ಕುಟ್ಟಿಕಲ, ಸುಧಾಕರ ಶೆಟ್ಟಿ ಮೊಗರೋಡಿ, ಸುರೇಶ್ ಮೀಯಾರು , ಚರಣ್ ಜುಮಾದಿಗುಡ್ಡೆ ಇವರ ಸಹಕಾರದಿಂದ ನೀಡುವ ದಿನಬಳಕೆಯ ವಸ್ತುಗಳ ಕಿಟ್ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಸಕರ ಕಚೇರಿಯಲ್ಲಿ ಕಲಾವಿದರಿಗೆ ಸಾಂಕೇತಿಕವಾಗಿ ವಿತರಿಸಿದರು.


ಕಾರ್ಯಕ್ರಮದ ಸಂಯೋಜಕ ಕಲಾವಿದ ಆಶೋಕ್ ಶೆಟ್ಟಿ ಸರಪಾಡಿ ಸ್ವಾಗತಿಸಿ, ವಂದಿಸಿದರು.

More from the blog

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...