Thursday, January 29, 2026

ಶಾಸಕ ರಾಜೇಶ್ ನಾಯ್ಕ್ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ  ಪರಿಶೀಲನೆ

ಬಂಟ್ವಾಳ : ನ್ಯಾಯಬೆಲೆ ಅಂಗಡಿಗಳ ಮೂಲಕ 2 ತಿಂಗಳ ಅಕ್ಕಿ ವಿತರಣಾ ಕಾರ್ಯ ನಡೆಯುತ್ತಿದ್ದು, ಮಂಗಳವಾರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ಪೇಟೆಯ ನ್ಯಾಯಬೆಲೆ ಅಂಗಡಿಗೆ ತೆರಳಿ ಅಕ್ಕಿ ವಿತರಣಾ ಕಾರ್ಯವನ್ನು ಪರಿಶೀಲಿಸಿದರು.

ಬಳಿಕ ಅವರು ಬಿ.ಸಿ.ರೋಡಿನಲ್ಲಿರುವ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರ ಜತೆಗೆ ಪಡಿತರ ಅಕ್ಕಿ ವಿತರಣೆಯ ಕಾರ್ಯದ ಜತೆ ಚರ್ಚಿಸಿದರು. ಕೊರೊನಾ ವೈರಸ್ ತಡೆಯ ಕುರಿತಂತೆ ತಾಲೂಕಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಾ ಪ್ರಭು ಅವರಿಂದ ಮಾಹಿತಿ ಪಡೆದರು.
ಪಡಿತರ ಅಕ್ಕಿ ವಿತರಣೆ ಹಾಗೂ ನಗರ ಆರೋಗ್ಯ ಆರೋಗ್ಯ ಕಾಳಜಿಯ ಕುರಿತು ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದರು. ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಸುದರ್ಶನ್ ಬಜ ಶಾಸಕರ ಜತೆಗಿದ್ದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...