φಬಂಟ್ವಾಳ: ನಮ್ಮ ಪಕ್ಷದ ಶಾಸಕರು ಶ್ರದ್ಧೆ, ನಿಷ್ಠೆಯಿಂದ ದುಡಿದ ಪರಿಣಾಮ ಹಾಗೂ ಕಳೆದ ೫ ವರ್ಷಗಳ ಅಭಿವೃದ್ಧಿ ಕಾರ್ಯ, ಶಾಂತಿ, ಸೌಹಾರ್ದಯುತ ಬಂಟ್ವಾಳ ನಿರ್ಮಾಣ ಈ ಬಾರಿಗೆಯ ಗೆಲುವಿಗೆ ಕಾರಣವಾಗಿದೆ ಎಂದು ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಅವರು ಗೆಲುವು ಸಾಧಿಸಿದ ಬಳಿಕ ಬಂಟ್ವಾಳ ಬಿಜೆಪಿ ಕಚೇರಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
ವಿರೋಧ ಪಕ್ಷದಲ್ಲಿದ್ದುಕೊಂಡು ಕೆಲಸ ಮಾಡಬೇಕಾದ ಸ್ಥಿತಿ ಇದ್ದು, ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇನೆ.
ಈ ಬಾರಿ ವಿರೋಧ ಪಕ್ಷದಲ್ಲಿದ್ದು, ಆಡಳಿತ ಪಕ್ಷದಲ್ಲಿದ್ದರೆ ಹಿಂದಿಗಿಂತ ಹೆಚ್ಚಿನ ಅಭಿವೃದ್ಧಿ ಮಾಡುವುದಕ್ಕೆ ಅವಕಾಶವಾಗುತ್ತಿತ್ತು. ಆದರೂ ಗರಿಷ್ಠ ಪ್ರಯತ್ನ ಮಾಡಿ ಅನುದಾನ ತಂದು ಅಭಿವೃದ್ಧಿ ಕಾರ್ಯ ಮಾಡಲಿದ್ದೇನೆ. ಜತೆಗೆ ಬಂಟ್ವಾಳದಲ್ಲಿ ಬಿಜೆಪಿಯಿಂದ ೨ನೇ ಬಾರಿಗೆ ಗೆದ್ದ ಮೊದಲ ಶಾಸಕನಾಗಿರುವುದಕ್ಕೆ ಹೆಚ್ಚು ಸಂತೋಷ ಪಡುತ್ತೇನೆ ಎಂದರು.

