Sunday, January 25, 2026

ಅಪಾಯದಲ್ಲಿ ರುವ ಮನೆಗಳಿಗೆ ನಾಡದೋಣಿಯ ಮೂಲಕ ಹೋಗಿ ವೀಕ್ಷಣೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ನೇತ್ರಾವತಿ ನದಿ ಕಿನಾರೆಯಲ್ಲಿ ಅಪಾಯದಲ್ಲಿರುವ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನಿವಾಸಿಗಳಾದ ಜಯಪೂಜಾರಿ,ಬಾಲಕೃಷ್ಣ ಪೂಜಾರಿ, ಲಕ್ಷಣ ಪೂಜಾರಿ, ಪೂವಪ್ಪ ಪೂಜಾರಿ ಎಂಬವರ ಮನೆಗಳಿಗೆ ನಾಡದೋಣಿಯ ಮೂಲಕ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಬೇಟಿ ನೀಡಿ ಸ್ಥಳಾಂತರ ಮಾಡಲು ಬೇಕಾದ ವ್ಯವಸ್ಥೆ ಕಲ್ಪಿಸಲು ಅಧಿಕಾರಿ ಗಳಿಗೆ ಸೂಚಿಸಿದರು.


ಈ ಮನೆಯವರಿಗೆ ರಸ್ತೆ ಸಂಪರ್ಕ ಸಂಪೂರ್ಣ ಕಡಿತವಾಗಿದ್ದು ದ್ವೀಪದಂತಿರುವ ಪ್ರದೇಶಗಳಿಗೆ ನಾಡದೋಣಿಯ ಮೂಲಕ ಮಾತ್ರ ಸಂಪರ್ಕ ಸಾಧ್ಯವಿದೆ.
ಹಾಗಾಗಿ ಅ ಮನೆಯ ಕಡೆಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಬೇಟಿ ನೀಡಿದರು.
ಬಳಿಕ ಅರ್ಧ ಜಲಾವೃತಗೊಂಡ ಅಜಿಲಮೊಗರು ಮಸೀದಿ ಗೆ ಬೇಟಿ ನೀಡಿ ಅಲ್ಲಿನ ಪ್ರಮುಖರ ಜೊತೆ ಮಾತನಾಡಿದರು. ತಿಂಗಳಾಡಿ ನಾರಾಯಣ ಪೂಜಾರಿ ಅವರ ಮನೆಯೂ ಅಪಾಯದಲ್ಲಿದೆ.
ಈ ಸಂದರ್ಭದಲ್ಲಿ ಪ್ರಮುಖರಾದ ದೇವದಾಸ ಶೆಟ್ಟಿ, ಗೋವಿಂದ ಪ್ರಭು, ಧನಂಜಯ ಶೆಟ್ಟಿ, ಪೂವಪ್ಪ ಪೂಜಾರಿ ಕಡಮಜೆ, ಪುರುಷೋತ್ತಮ ಪೂಜಾರಿ ಮಜಲು, ವಸಂತ ಪೂಜಾರಿ ದೆಚ್ಚಾರು, ನಾರಾಯಣ ಪೂಜಾರಿ ದೆಚ್ಚಾರು,ಆನಂದ ಶೆಟ್ಟಿ ಬಾಚಕೆರೆ, ಅಭಿಷೇಕ್ ಪೂಜಾರಿ, ಸುದರ್ಶನ ಬಜೆ, ಶಶಿಕಾಂತ್ ಶೆಟ್ಟಿ, ರಮಾನಾಥ ರಾಯಿ, ಪುರುಷೋತ್ತಮ ಶೆಟ್ಟಿ ಬಾರೇಕಿರಾಡಿ, ಮನೋಜ್ ಕೊಟ್ಯಾನ್, ಪ್ರದೀಪ್ ಅಜ್ಜಿಬೆಟ್ಟು, ಮತ್ತಿತರರು ಉಪಸ್ಥಿತರಿದ್ದರು.

More from the blog

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...

ತುಂಬೆ ದಿವೀಶ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಾರ್ಷಿಕೋತ್ಸವ..

ಬಂಟ್ವಾಳ: ತುಂಬೆ ದಿವೀಶ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಾರ್ಷಿಕೋತ್ಸವ ಟ್ರಸ್ಟ್ ನ ಅಧ್ಯಕ್ಷ ಜಿ.ಪಂ.ಮಾಜಿ‌ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ವಕೀಲರಾದ ಅಭಿನಯ ಚಿದಾನಂದ ಮಾತನಾಡಿ...