Tuesday, July 8, 2025

ಸೋಶಿಯಲ್ ಮೀಡಿಯಾ ಈಸ್ ಪವರ್ ಫುಲ್‌ ವೆಪನ್ ಆ್ಯಂಡ್ ಡೇಂಜರಸ್ ವೆಪನ್: ರಾಜೇಶ್ ಕೆ.ವಿ.

ವಾಮದಪದವು ಸ.ಪ್ರ.ದ.ಕಾಲೇಜು,
ಕಾರ್ಯ ನಿರತ ಪತ್ರಕರ್ತರ ಸಂಘ ಬಂಟ್ವಾಳ ವತಿಯಿಂದ ಮಾಹಿತಿ ಕಾರ್ಯಾಗಾರ

ಸೋಶಿಯಲ್ ಮೀಡಿಯಾ ಈಸ್ ಪವರ್ ಫುಲ್‌ ವೆಪನ್ ಆ್ಯಂಡ್ ಡೇಂಜರಸ್ ವೆಪನ್

ಸಾಮಾಜಿಕ ಜಾಲತಾಣದ ಒಳಿತು ಕೆಡುಕಿನ ಅರಿವಿರಲಿ: ರಾಜೇಶ್ ಕೆ.ವಿ.


ಬಂಟ್ವಾಳ: ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣ ಎಷ್ಟು ಅವಶ್ಯಕತೆ ಇದೆಯೋ ಅದಕ್ಕಿಂತ ಹೆಚ್ಚು ಅನನುಕೂಲವನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮೊಬೈಲನ್ನು ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಸಿಕೊಳ್ಳುವಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರು ಕಿವಿಮಾತು ಹೇಳಿದರು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳ, ಪ್ರೆಸ್ ಕ್ಲಬ್ ಬಿ.ಸಿ‌.ರೋಡ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ ಪ್ರಯುಕ್ತ ಶುಕ್ರವಾರ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಾಮಾಜಿಕ ಜಾಲತಾಣ- ಸಾಧಕ ಬಾಧಕಗಳು ಕುರಿತ
ಮಾಹಿತಿ ಕಾರ್ಯಾಗಾರದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು. ಅತಿಯಾಗಿ ಮೊಬೈಲ್ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಯಿಂದ ಎಚ್ಚರಿಕೆ ವಹಿಸಬೇಕೆಂದ ಅವರು ಇದು ಮಹಿಳಾ ದೌರ್ಜನ್ಯದಂತಹ ಪ್ರಕರಣಗಳಿಗೂ ಕಾರಣವಾಗುತ್ತದೆ ಎಂದರು.
ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಕಾರ್ಯಕ್ರಮ ಉದ್ಘಾಟಿಸಿದರು.
ಕಾಲೇಜು ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್ ಬಿ.ಶೆಟ್ಟಿ ಅಧ್ಯಕ್ಷತೆ ವಹಿಸಿ ಸಾಮಾಜಿಕ ಜಾಲತಾಣದ ಸಾಧಕ ಮತ್ತು ಬಾಧಕಗಳ ಬಗ್ಗೆ ಅರಿತುಕೊಂಡು ವಿದ್ಯಾರ್ಥಿಗಳು ಜಾಗೃತರಾಗಬೇಕು ಎಂದರಲ್ಲದೆ ಈ ದೆಸೆಯಲ್ಲಿ ಬಂಟ್ವಾಳ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ ಕಾರ್ಯಾಗಾರ ಆಯೋಜಿಸಿರುವುದು ಸ್ತುತ್ಯಾರ್ಹವಾಗಿದೆ ಎಂದರು.
ಎನ್ನೆಸೆಸ್ ನಿಂದ ವಿದ್ಯಾರ್ಥಿಗಳಲ್ಲಿ ಗ್ರಾಮಾಭಿವೃದ್ಧಿಯ ಅರಿವು ಉಂಟಾಗುವುದು. ಇದನ್ನು ಬಳಸಿಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಪತ್ರಕರ್ತರ ಸಂಘದ ಉಪಾಧ್ಯಕ್ಷ ಯಾದವ ಕುಲಾಲ್, ಕೋಶಾಧಿಕಾರಿ ವೆಂಕಟೇಶ್ ಬಂಟ್ವಾಳ ಉಪಸ್ಥಿತರಿದ್ದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಪ್ರಬಂಧ ಸ್ಪರ್ಧೆಯ ಬಹುಮಾನಗಳನ್ನು ವಿತರಿಸಲಾಯಿತು. ಸದಸ್ಯ ರತ್ನದೇವ್ ಪುಂಜಾಲಕಟ್ಟೆ ವಿಜೇತರ ವಿವರ ನೀಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಮೌನೇಶ ವಿಶ್ವಕರ್ಮ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ: ರೊನಾಲ್ಡ್ ಪ್ರವೀಣ್ ಕೊರೆಯ ವಂದಿಸಿದರು. ಈ ಸಂದರ್ಭ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿನಿ ಶ್ವೇತಾಕ್ಷಿ ಕಾರ್ಯಕ್ರಮ ನಿರ್ವಹಿಸಿದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...