Thursday, February 13, 2025

ಅನ್ನದಾನಕ್ಕಿಂತಲೂ ಶ್ರೇಷ್ಟದಾನ ರಕ್ತದಾನ: ನವೀನ್ ಕುಮಾರ್

ಹಿಂದೂ ಜನ ಸೇವಾ ಸಮಿತಿ ಬೊಂಡಾಲ, ಬೋಳಂಗಡಿ, ಲಯನ್ಸ್ ಕ್ಲಬ್ ಬಂಟ್ವಾಳ ಇವರ ಆಶ್ರಯದಲ್ಲಿ ಬ್ಲಡ್ ಬ್ಲಾಂಕ್ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಬೋಳಂಗಡಿಯಲ್ಲಿ 72 ರಕ್ತದಾನಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.
ರಕ್ತದಾನ ಶಿಬಿರದ ಸಮಾರಂಭದ ಅಧ್ಯಕ್ಷತೆಯನ್ನು ಹಿಂದೂ ಜನ ಸೇವಾ ಸಮಿತಿಯ ಅಧ್ಯಕ್ಷರಾದ ನವೀನ್ ಕುಮಾರ್ ವಹಿಸಿದ್ದರು.
ಮುಖ್ಯ ಅತಿಥಿಯಾದ ಎಂ.ಎನ್.ಕುಮಾರ್ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮನುಷ್ಯನಿಗೆ ಅತೀ ಹತ್ತಿರವಾದ ವಸ್ತು ರಕ್ತ. ಇದು ಜೀವ ಸಂಚಾರದ ದ್ರವ ಇದರ ದಾನ ವರ್ಗಾವಣೆಯಿಂದ ಈ ದ್ರವ ಶಾಶ್ವತವಾಗಿರುತ್ತದೆ. ಸಾವಿನ ದವಡೆಗೆ ಸಿಲುಕಿದ ವ್ಯಕ್ತಿಗೆ ನಮ್ಮಿಂದ ಜೀವದಾನವಾಗುತ್ತದೆ. ಅನ್ನದಾನ ಒಂದು ಎರಡು ಹೊತ್ತಿನ ಹಸಿವನ್ನು ಮಾತ್ರ ನೀಗಿಸಬಲ್ಲದು. ರಕ್ತದಾನ ಜೀವನದ ಉದ್ದಕ್ಕೂ ಆರೋಗ್ಯವಂತನಾಗಿ ಮಾಡುತ್ತದೆ. ಆದ್ದರಿಂದ ಎಲ್ಲಾ ದಾನಕ್ಕಿಂತಲೂ ರಕ್ತದಾನವೇ ಶ್ರೇಷ್ಟ.
ಮುಖ್ಯ ಅತಿಥಿಗಳಾದ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀನಿವಾಸ ಪಜಾರಿ, ಲಯನ್ಸ್ ಕ್ಲಬ್ ಕಾರ್ಯದರ್ಶಿ ರಾಧಾಕೃಷ್ಣ ಬಂಟ್ವಾಳ, ಲಯನ್ಸ್ ಕ್ಲಬ್ ಕೋಶಾಧಿಕಾರಿ ದೇವಿಕಾ ದಾಮೋದರ್, ಲಯನ್ಸ್ ವಲಯಾಧ್ಯಕ್ಷರಾದ ಸುಧಾಕರ ಆಚಾರ್ಯ, ಕೆ.ಎಂ.ಸಿ. ಡಾ| ಐಶ್ವರ್ಯ ಇವರೆಲ್ಲರೂ ರಕ್ತದಾನ ಬಗ್ಗೆ ಸವಿವರವಾಗಿ ಮಾತನಾಡಿದರು. ಲಯನ್ಸ್ ಕ್ಲಬ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು, ಮೆಲ್ಕಾರ್ ಯುವ-ಸಂಗಮದ ಸದಸ್ಯರು ಉಪಸ್ಥಿತರಿದ್ದು ಹಿಂದೂ ಜನಸೇವಾ ಸಮಿತಿಯ ಸಂಚಾಲಕರಾದ ಪಿ.ಬಿ. ಗಿರಿಧರ್ ಸ್ವಾಗತಿಸಿ ಕೋಶಾಧಿಕಾರಿ ಸುಧಾಕರ್ ವಂದಿಸಿದರು. ಗುರುಪ್ರಸಾದ್ ಕಾರ್ಯಕ್ರಮ ಸಂಯೋಜಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...