Wednesday, July 2, 2025

ಅನ್ನದಾನಕ್ಕಿಂತಲೂ ಶ್ರೇಷ್ಟದಾನ ರಕ್ತದಾನ: ನವೀನ್ ಕುಮಾರ್

ಹಿಂದೂ ಜನ ಸೇವಾ ಸಮಿತಿ ಬೊಂಡಾಲ, ಬೋಳಂಗಡಿ, ಲಯನ್ಸ್ ಕ್ಲಬ್ ಬಂಟ್ವಾಳ ಇವರ ಆಶ್ರಯದಲ್ಲಿ ಬ್ಲಡ್ ಬ್ಲಾಂಕ್ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಬೋಳಂಗಡಿಯಲ್ಲಿ 72 ರಕ್ತದಾನಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.
ರಕ್ತದಾನ ಶಿಬಿರದ ಸಮಾರಂಭದ ಅಧ್ಯಕ್ಷತೆಯನ್ನು ಹಿಂದೂ ಜನ ಸೇವಾ ಸಮಿತಿಯ ಅಧ್ಯಕ್ಷರಾದ ನವೀನ್ ಕುಮಾರ್ ವಹಿಸಿದ್ದರು.
ಮುಖ್ಯ ಅತಿಥಿಯಾದ ಎಂ.ಎನ್.ಕುಮಾರ್ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮನುಷ್ಯನಿಗೆ ಅತೀ ಹತ್ತಿರವಾದ ವಸ್ತು ರಕ್ತ. ಇದು ಜೀವ ಸಂಚಾರದ ದ್ರವ ಇದರ ದಾನ ವರ್ಗಾವಣೆಯಿಂದ ಈ ದ್ರವ ಶಾಶ್ವತವಾಗಿರುತ್ತದೆ. ಸಾವಿನ ದವಡೆಗೆ ಸಿಲುಕಿದ ವ್ಯಕ್ತಿಗೆ ನಮ್ಮಿಂದ ಜೀವದಾನವಾಗುತ್ತದೆ. ಅನ್ನದಾನ ಒಂದು ಎರಡು ಹೊತ್ತಿನ ಹಸಿವನ್ನು ಮಾತ್ರ ನೀಗಿಸಬಲ್ಲದು. ರಕ್ತದಾನ ಜೀವನದ ಉದ್ದಕ್ಕೂ ಆರೋಗ್ಯವಂತನಾಗಿ ಮಾಡುತ್ತದೆ. ಆದ್ದರಿಂದ ಎಲ್ಲಾ ದಾನಕ್ಕಿಂತಲೂ ರಕ್ತದಾನವೇ ಶ್ರೇಷ್ಟ.
ಮುಖ್ಯ ಅತಿಥಿಗಳಾದ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀನಿವಾಸ ಪಜಾರಿ, ಲಯನ್ಸ್ ಕ್ಲಬ್ ಕಾರ್ಯದರ್ಶಿ ರಾಧಾಕೃಷ್ಣ ಬಂಟ್ವಾಳ, ಲಯನ್ಸ್ ಕ್ಲಬ್ ಕೋಶಾಧಿಕಾರಿ ದೇವಿಕಾ ದಾಮೋದರ್, ಲಯನ್ಸ್ ವಲಯಾಧ್ಯಕ್ಷರಾದ ಸುಧಾಕರ ಆಚಾರ್ಯ, ಕೆ.ಎಂ.ಸಿ. ಡಾ| ಐಶ್ವರ್ಯ ಇವರೆಲ್ಲರೂ ರಕ್ತದಾನ ಬಗ್ಗೆ ಸವಿವರವಾಗಿ ಮಾತನಾಡಿದರು. ಲಯನ್ಸ್ ಕ್ಲಬ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು, ಮೆಲ್ಕಾರ್ ಯುವ-ಸಂಗಮದ ಸದಸ್ಯರು ಉಪಸ್ಥಿತರಿದ್ದು ಹಿಂದೂ ಜನಸೇವಾ ಸಮಿತಿಯ ಸಂಚಾಲಕರಾದ ಪಿ.ಬಿ. ಗಿರಿಧರ್ ಸ್ವಾಗತಿಸಿ ಕೋಶಾಧಿಕಾರಿ ಸುಧಾಕರ್ ವಂದಿಸಿದರು. ಗುರುಪ್ರಸಾದ್ ಕಾರ್ಯಕ್ರಮ ಸಂಯೋಜಿಸಿದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...