Thursday, February 13, 2025

ಬೋಳಂತೂರಿನಲ್ಲಿ ಎಸ್‌ಎಸ್‌ಎಫ್‌ನ ವತಿಯಿಂದ ರಕ್ತದಾನ ಶಿಬಿರ

ವಿಟ್ಲ: ಎಸ್‌ಎಸ್‌ಎಫ್ ಕಲ್ಲಡ್ಕ ಸೆಕ್ಟರ್, ದೇರಳಕಟ್ಟೆ ಯೆನಪೋಯ ಮೆಡಿಕಲ್ ಕಾಲೇಜು ಸಹಭಾಗಿತ್ವದಲ್ಲಿ ಎಸ್‌ಎಸ್‌ಎಫ್ ಜಿಲ್ಲಾ ಬ್ಲಡ್ ಸೈಬೋ ವತಿಯಿಂದ ೫೮ನೇ ರಕ್ತದಾನ ಶಿಬಿರ ವಿಟ್ಲ ಸಮೀಪದ ಬೋಳಂತೂರು ಎನ್.ಸಿ ರೋಡ್‌ನಲ್ಲಿ ನಡೆಯಿತು.
ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ದುವಾ ಆಶೀರ್ವಚನ ನೀಡಿದರು. ಮುಶ್ತಕುರ್ರಹ್ಮಾನ್ ತಂಙಳ್ ಚಟ್ಟೆಕಲ್ಲು ಉದ್ಘಾಟಿಸಿದರು. ಎಸ್‌ಎಸ್‌ಎಫ್ ಕಲ್ಲಡ್ಕ ಸೆಕ್ಟರ್ ಅಧ್ಯಕ್ಷ ಮಹಮ್ಮದ್ ಮಜೀದ್ ಅಧ್ಯಕ್ಷತೆ ವಹಿಸಿದ್ದರು. ದಾರುಲ್ ಅಶ್ ಅರಿಯ್ಯದ ವ್ಯವಸ್ಥಾಪಕ ಮಹಮ್ಮದಾಲಿ ಸಖಾಫಿ ಪ್ರಭಾಷಣ ಮಾಡಿದರು.

ಸಂದೇಶ ಭಾಷಣ ಮಾಡಿದ ಎಸ್‌ಎಸ್‌ಎಫ್ ಜಿಲ್ಲಾ ಕ್ಯಾಂಪಸ್ ಕಾರ್‍ಯದರ್ಶಿ ಮಹಮ್ಮದ್ ಅಲಿ ತುರ್ಕಳಿಕೆ ಅವರು ಕೋಮುವಾದ ಹಾಗೂ ಭಯೋತ್ಪಾದನೆಯನ್ನು ಪ್ರತಿಯೊಂದು ಧರ್ಮಗಳು ವಿರೋಧಿಸುತ್ತದೆ. ಸರ್ವ ಧರ್ಮಗಳು ಶಾಂತಿಯ ಸಂದೇಶ ನೀಡುತ್ತದೆ. ಕೋಮುವಾದ ದೇಶಕ್ಕೆ ಆಪತ್ತು. ಸರ್ವ ಧರ್ಮಿಯರು ಜತೆಯಾಗಿ ಕೋಮುವಾದವನ್ನು ಮಟ್ಟಹಾಕಬೇಕು. ದೇಶದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಯತ್ನಗಳು ದೇಶದ ದುರಂತವಾಗಿದೆ. ರಕ್ತದಾನಗಳ ಮೂಲಕ ಮಾನವೀಯ ಮೌಲ್ಯಗಳು ವೃದ್ಧಿಯಾಗುತ್ತದೆ ಎಂದರು.
ಎಸ್‌ಎಸ್‌ಎಫ್ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಮಾತನಾಡಿ ರಕ್ತವನ್ನು ಮನುಷ್ಯರಿಂದ ಮಾತ್ರ ಶೇಖರಿಸಿಕೊಳ್ಳಬಹುದಾಗಿದೆ. ರಕ್ತದಾನ ಶ್ರೇಷ್ಠ ಕಾರ್‍ಯವಾಗಿದೆ. ಎಸ್‌ಎಸ್‌ಎಫ್ ದಾಖಲೆ ಮಟ್ಟದಲ್ಲಿ ರಕ್ತದಾನ ಶಿಬಿರಗಳನ್ನು ಹಮ್ಮಿಕೊಂಡು ಬರುತ್ತಿದೆ ಎಂದರು.

ಕಾರ್‍ಯಕ್ರಮದಲ್ಲಿ ಮದರಸದಲ್ಲಿ ಸೇವೆ ಸಲ್ಲಿಸಿದ ಅಲ್‌ಹಾಜ್ ಸುಲೈಮಾನ್ ಮುಸ್ಲಿಯಾರ್ ನಾರ್ಶ, ೫೦ ಬಾರಿಗಿಂತ ಹೆಚ್ಚು ರಕ್ತದಾನ ಮಾಡಿದ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು, ಅಂತಾರಾಷ್ಟ್ರೀಯ ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಬೆಳ್ಳಿಪದಕ ಪಡೆದ ಕೃಷ್ಣಪ್ಪ ಕೊಕ್ಕಪುಣಿ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಇಸ್ಮಾಯಿಲ್ ಬಬ್ಬುಕಟ್ಟೆ, ಇಸ್ಮಾಯಿಲ್ ಮಾಸ್ಟರ್ ಮಂಗಳಪದವು, ಸುಲೈಮಾನ್ ಮುಸ್ಲಿಯಾರ್, ಇಬ್ರಾಹಿಂ ಖಲೀಲ್ ಮುಸ್ಲಿಯಾರ್, ಮುತ್ತಲಿಬ್ ನಾರ್ಶ, ಚಂದ್ರಶೇಖರ ರೈ ಬೋಳಂತೂರು, ಅಬ್ದುಲ್ ಹಮೀದ್ ಮದನಿ, ಎಸ್.ಎಂ ಅಬೂಬಕ್ಕರ್, ಅಬ್ದುಲ್ ರಶೀದ್ ಹಾಜಿ ವಗ್ಗ, ಅಬೀದ್ ನಈಮಿ, ಅಕ್ಬರ್ ಅಲಿ ಮದನಿ, ಹಾರೀಸ್ ಪೆರಿಯಪಾದೆ, ಅಲಿ ಮದನಿ, ಇಬ್ರಾಹಿಂ ಕರೀಂ ಕದ್ಕರ್, ಅಬ್ದುಲ್ ಹಮೀದ್ ಮುಸ್ಲಿಯಾರ್, ಮುಸ್ತಫಾ ಕೋಡಪದವು, ಖಾದರ್ ಸಖಾಫಿ, ಅಬ್ಬಾಸ್ ಮುಸ್ಲಿಯಾರ್, ಜಯರಾಜ್, ರಫೀಕ್ ಮಾಡದ ಬಳಿ, ಸಿ.ಎಚ್ ರಝಾಕ್, ದಾವೂದ್, ಇಲ್ಯಾಸ್, ವಾಜೀದ್ ಹನೀಫಿ, ಜಬ್ಬಾರ್ ಕಣ್ಣೂರು, ಖಾದರ್ ಕೊಕ್ಕಪುಣಿ, ಅಬ್ದುಲ್ಲ ನಾರಂಕೋಡಿ ಮೊದಲಾದವರು ಉಪಸ್ಥಿತರಿದ್ದರು.

 

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...