ಬಂಟ್ವಾಳ: ಸಿ.ಎಂ. ಬಿ.ಎಸ್.ವೈ ಇತ್ತೀಚೆಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೊರೊನ ವೈರಸ್ ನಿಂದ ತತ್ತರಿಸಿ ಲಾಕ್ ಡೌನ್ ಆದೇಶ ಜಾರಿಯಾದ ದಿನದಿಂದ ಸಾರ್ವಜನಿಕರು ತಮ್ಮ 2 ತಿಂಗಳ ಗ್ರಹ ವಿದ್ಯುತ್ ಬಿಲ್ಲನ್ನು ಮನ್ನಾ ಮಾಡುವಂತೆ ತಿಳಿಸಿದ್ದರು.

ಆದರೆ ಮೆಸ್ಕಾಂ ಇಲಾಖೆಯವರು ಮನೆಗಳ ವಿದ್ಯುತ್ ಬಿಲ್ಲಿನಲ್ಲಿ 3 ತಿಂಗಳ ವಿದ್ಯುತ್ ಬಿಲ್ಲನ್ನು ಒಟ್ಟಿಗೆ ಸೇರಿಸಿ ಪಾವತಿಸುವಂತೆ ಒತ್ತಾಯಿಸುತ್ತಿರುವುದು ಗ್ರಹ ಬಳಕೆದಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಹಾಗೂ ಇದು ತೀವ್ರ ಖಂಡನೀಯವಾಗಿದ್ದು, ಇದನ್ನು ತಕ್ಷಣ ರದ್ದುಗೊಳಿಸಿ ಕ್ರಮ ಕೈಕೊಳ್ಳುವಂತೆ ಒತ್ತಾಯಿಸುತ್ತೇನೆ. ಇದನ್ನು ಸರಿಪಡಿಸದಿದ್ದಲ್ಲಿ ತೀವ್ರ ಪ್ರತಿಭಟನೆ ನಡೆಸುವುದಾಗಿ ಮಾಜಿ ಸಚಿವ ಬಿ. ರಮಾನಾಥ ರೈ ಎಚ್ಚರಿಸಿದ್ದಾರೆ.

