Monday, February 2, 2026

ಮಾಜಿ ಸಚಿವ ರೈ ಕೋರಿಕೆಗೆ ಸ್ಪಂದಿಸಿದ ಬಂಟ್ವಾಳ್ : ಸಾಂಗ್ಲಿಯಲ್ಲಿ ಸಿಲುಕಿರುವ ಕನ್ನಡಿಗರಿಗೆ ಪುನರ್ವಸತಿ ನಿರ್ಮಾಣ

ಸಾಂಗ್ಲಿ (ಮೀರಾಜ್): ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೀರಾಜ್ ನಲ್ಲಿ ಲಾಕ್ ಡೌನ್ ನಿಂದ ಸಿಕ್ಕಾಕೊಂಡಿರುವ ಕರ್ನಾಟಕ ದಕ್ಷಿಣ ಕನ್ನಡ ಮೂಲದ (ಖಾಸಾಗಿ ಸಂಸ್ಥೆಯಲ್ಲಿದ್ದ) ಸುಮಾರು 19 ಯುವ ಉದ್ಯೋಗಿಗಳಿಗೆ ಪುನರ್ವಸತಿ ಮಾಡಲಾಯಿತು.

ಮಾಜಿ ಸಚಿವ ಬಿ.ರಮಾನಾಥ ರೈ ಅವರನ್ನು ಸಂಪರ್ಕಿಸಿದ ಯುವಕರ ಕೋರಿಕೆ ಮೇರೆಗೆ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ರಾಜ್ಯ ಅದ್ಯಕ್ಷ ರೋನ್ಸ್ ಬಂಟ್ವಾಳ್ ಇವರನ್ನು ಸಂಪರ್ಕಿಸಿದ ರೈ ಅವರ ಕೋರಿಕೆಯಂತೆ ರೋನ್ಸ್ ಬಂಟ್ವಾಳ್ ತತ್‌ಕ್ಷಣವೇ ಸಿಕ್ಕಾಕಿಕೊಂಡ ಯುವಕರನ್ನು ಸಂಪರ್ಕಿಸಿ ಪೂರ್ಣ ಮಾಹಿತಿ ಪಡೆದು ಸಾಂಗ್ಲಿಯ ಕೈಗಾರಿಕೋದ್ಯಮಿ, ಬಿಲ್ಲವ ಸಂಘ ಸಾಂಗ್ಲಿ ಇದರ ಉಪಾಧ್ಯಕ್ಷ ಸುಧಾಕರ ಪೂಜಾರಿ (ಹೊಸ್ಮಾರು) ಇವರಿಗೆ ವಿಷಯ ತಿಳಿಸಿದ್ದರು.
ಕೆಲವೇ ನಿಮಿಷಗಳಲ್ಲಿ ಯುವಕರನ್ನು ಖುದ್ದಾಗಿ ಭೇಟಿಯಾದ ಸುಧಾಕರ್ ಮತ್ತು ರಘುರಾಮ ಪೂಜಾರಿ (ಬಾಳೆಹೊನ್ನೂರು) ಇವರು ಯುವಕರ ವಾಸ್ತವ್ಯ, ಅಲ್ಲಿನ ಪರಿಸ್ಥಿತಿ ತಿಳಿದು ಸಾಂಗ್ಲಿ ಜಿಲ್ಲಾಧಿಕಾರಿ, ಪೋಲಿಸ್ ಆಯುಕ್ತರ ಗಮನಕ್ಕೆ ತಂದಿದ್ದರು.

ಅಂತೆಯೇ ಸ್ಥಾನೀಯ ಪ್ರಭಾವಿ ನಾಯಕ, ಯುವ ಉದ್ಯಮಿ, ಸಮಾಜ ಸೇವಕ, ಕನ್ನಡಿಗ ಪ್ರವೀಣ್ ಶೆಟ್ಟಿ ಕೊಡಗು ಇವರ ನೆರವಿನೊಂದಿಗೆ ಪೋಲಿಸ್ ಮುಖ್ಯಸ್ಥರೇ ಆಗಮಿಸಿ ಎಲ್ಲಾ ಯುವಕರ ಮಾಹಿತಿ ಕಲೆಹಾಕಿ ಆರೋಗ್ಯ ತಪಾಸನೆ ನಡೆಸಿ ಶಾಸನ, ಜಿಲ್ಲಾಧಿಕಾರಿ ಸಹಕಾರ ಪಡೆದು ಬಸ್ ಮೂಲಕ ಸಾಂಗ್ಲಿಗೆ ರವಾನಿಸಿ ಅಲ್ಲಿನ ಮುನ್ಸಿಪಾಲಿಟಿ ಕನ್ನಡ ಶಾಲೆಯಲ್ಲಿ ಉಳಕೊಳ್ಳುವ ವ್ಯವಸ್ಥೆ ಮಾಡಿರುವರು. ಕನ್ನಡಿಗ ಮುಖ್ಯ ಶಿಕ್ಷಕ ವಿಠಲ್ ಕೋಲಿ ಯುವಕರನ್ನು ಬರಮಾಡಿಕೊಂಡರು.

 

ಇಲ್ಲಿ ನೆಲೆಯಾಗಿರುವ ಸಂಕಷ್ಟದಲ್ಲಿನ ಕರುನಾಡ ಜನತೆಯ ಆರೈಕೆ ಮಾಡುವುದು ನಮ್ಮ ಜವಾಬ್ದಾರಿ. ಅಂತಯೇ ಇವರೆಲ್ಲರ ಇಡೀ ಆರೋಗ್ಯವನ್ನು ಪರಿಶೀಲಿಸಿ ಸೂಕ್ತ ವ್ಯವಸ್ಥೆ ಮಾಡಿ ಕೊಡಲಾಗುವುದು. ಈ ಬಗ್ಗೆ ಇವರ ಪಾಲಕರು ಚಿಂತನೆ ಮಾಡುವ ಅಗತ್ಯವಿಲ್ಲ ಎಂದು ಪ್ರವೀಣ್ ಶೆಟ್ಟಿ ತಿಳಿಸಿದರು.
ಈ ಯುವಕರು ಲಾಕ್ ಡೌನ್ ತನಕ ಆರಾಮವಾಗಿ ಇಲ್ಲಿ ಇರಬಹುದು. ಸದ್ಯ ಉಳಕೊಂಡಿರುವ ನಿವಾಸದ ಬಾಡಿಗೆ, ಇಲ್ಲಿನ ಅವಶ್ಯಕ ಹಣಕಾಸು ಬಗ್ಗೆ ಕೂಡಾ ವ್ಯವಸ್ಥೆ ಮಾಡಲಾಗುವುದು ಎಂದು ಸುಧಾಕರ ಪೂಜಾರಿ ತಿಳಿಸಿದ್ದಾರೆ.
ರಮಾನಾಥ ರೈ ಅವರು ರೋನ್ಸ್ ಬಂಟ್ವಾಳ್ ಮತ್ತು ಸುಧಾಕರ ಪೂಜಾರಿ ಜೊತೆ ಮಾತನಾಡುತ್ತಾ ಶೀಘ್ರಗತಿಯ ಸ್ಪಂದನೆಗೆ ಎಲ್ಲರಿಗೂ ಅಭಿವಂದಿಸಿದ್ದಾರೆ.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...