ಬಂಟ್ವಾಳ : ದೇಶಾದ್ಯಂತ ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಸಾರ್ವಜನಿಕರ ಹಿತರಕ್ಷಣೆಯ ದೃಷ್ಟಿಯಿಂದ ಎಂದಿನಂತೆ ಸೇವೆ ಲಭ್ಯವಿದೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಜಿನಸಿ, ತರಕಾರಿ, ಹಾಲು ಅಗತ್ಯ ವಸ್ತುಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 12 ತೆರೆದಿರುತ್ತದೆ.


ಮೆಡಿಕಲ್, ಪೆಟ್ರೋಲ್ ಬಂಕ್ ಸಹಜವಾಗಿ ಸೇವೆಗೆ ಲಭ್ಯ ಇರುತ್ತದೆ. ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿಗೆ ಬರುವಾಗ ಕರೋನ ಸೋಂಕು ಹರಡದಂತೆ ಜನರು ತಮ್ಮ ಮಧ್ಯೆ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು. ಸುರಕ್ಷಾ ಮತ್ತು ಮುನ್ನಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು.
ಸಾರ್ವಜನಿಕ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ವಿನಂತಿಸಲಾಗಿದೆ.












