Tuesday, July 1, 2025

ವಿಟ್ಲದ ಅಡ್ಡದಬೀದಿ-ಬಾಕಿಮಾರ್ ಬೈಪಾಸ್ ರಸ್ತೆ ಉದ್ಘಾಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವತಿಯಿಂದ ನಗರೋತ್ಥಾನ ಅನುದಾನದಲ್ಲಿ ನೂತನವಾಗಿ ನಿರ್‍ಮಾಣಗೊಂಡ ವಿಟ್ಲದ ಅಡ್ಡದಬೀದಿ-ಬಾಕಿಮಾರ್ ಬೈಪಾಸ್ ರಸ್ತೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಬುಧವಾರ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು ಗ್ರಾಮದ ಅಭಿವೃದ್ಧಿಯಾಗಲು ಗ್ರಾಮದ ಜನರ ಸಹಕಾರ ಅಗತ್ಯ. ಸಹಕಾರ ಇಲ್ಲದಿದ್ದರೆ ಗ್ರಾಮ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಒಂದು ನಗರ ಅಭಿವೃದ್ಧಿ ಹೊಂದಲು ವಿವಿಧ ಯೋಜನೆಗಳ ಮೂಲಕ ಅನುದಾನ ಅಗತ್ಯವಾಗಿದೆ. ಅದೀಗ ನಡೆಯುತ್ತಿದೆ. ವಿಟ್ಲದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ನಗರೋತ್ಥಾನ ಯೋಜನೆಯಲ್ಲಿ ಬೈಪಾಸ್ ರಸ್ತೆ ನಿರ್ಮಾಣಗೊಂಡಿದೆ. ಚರಂಡಿ, ಪಾರ್ಕಿಂಗ್ ವ್ಯವಸ್ಥೆಗಳು, ರಸ್ತೆಗಳು ನಗರ ಅಗತ್ಯವಾಗಿ ಬೇಕಾಗಿದೆ. ವಿಟ್ಲದ ವಾಹನ ದಟ್ಟಣೆ ನಿಯಂತ್ರಿಸಲು ಈ ಒಂದು ರಸ್ತೆಯಿಂದ ಸಾಧ್ಯವಿಲ್ಲ. ಇದೇ ರೀತಿಯಾಗಿ ಇನ್ನಷ್ಟು ರಸ್ತೆ ನಿರ್ಮಾಣಗೊಂಡ ಮಾತ್ರ ಸಾಧ್ಯವಾಗಿದೆ ಎಂದು ತಿಳಿಸಿದರು.
ಬಳಿಕ ಪಟ್ಟಣ ಪಂಚಾಯಿತಿನಲ್ಲಿ ಎಸ್‌ಎಫ್‌ಸಿ ೭.೨೫ರಲ್ಲಿ ಕಾಯ್ದಿರಿಸಿದ ಹಣದಲ್ಲಿ ೬೫ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿದರು. ಕಚ್ಚಾ ಮನೆ ರಿಪೇರಿಗೆ ೪೧ ಮಂದಿಗೆ ಚೆಕ್ ವಿತರಿಸಲಾಯಿತು.
ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ್ ಎಂ ವಿಟ್ಲ, ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಮುಖ್ಯಾಧಿಕಾರಿ ಮಾಲಿನಿ, ಸದಸ್ಯರಾದ ರಾಮ್‌ದಾಸ್ ಶೆಣೈ, ಲೋಕನಾಥ ಶೆಟ್ಟಿ ಕೊಲ್ಯ, ಉಷಾ ಕೃಷ್ಣಪ್ಪ, ಮಂಜುನಾಥ ಕಲ್ಲಕಟ್ಟ, ಶ್ರೀಕೃಷ್ಣ, ಬಿಜೆಪಿ ನಗರ ಅಧ್ಯಕ್ಷ ಮೋಹನದಾಸ ಉಕ್ಕುಡ, ಕಂದಾಯ ನಿರೀಕ್ಷಕ ಪಕೀರ ಮೂಲ್ಯ, ಕಾಮಗಾರಿ ಗುತ್ತಿಗೆ ವಹಿಸಿದ ಮುಗೆರೋಡಿ ಕನ್‌ಸ್ಟ್ರಕ್ಷನ್ ಸಂಸ್ಥೆಯ ಎಂಜಿನಿಯರ್ ಸಚಿನ್ ಶೆಟ್ಟಿ ಉಪಸ್ಥಿತರಿದ್ದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...