Thursday, February 13, 2025

ವಿಟ್ಲದ ಅಡ್ಡದಬೀದಿ-ಬಾಕಿಮಾರ್ ಬೈಪಾಸ್ ರಸ್ತೆ ಉದ್ಘಾಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವತಿಯಿಂದ ನಗರೋತ್ಥಾನ ಅನುದಾನದಲ್ಲಿ ನೂತನವಾಗಿ ನಿರ್‍ಮಾಣಗೊಂಡ ವಿಟ್ಲದ ಅಡ್ಡದಬೀದಿ-ಬಾಕಿಮಾರ್ ಬೈಪಾಸ್ ರಸ್ತೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಬುಧವಾರ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು ಗ್ರಾಮದ ಅಭಿವೃದ್ಧಿಯಾಗಲು ಗ್ರಾಮದ ಜನರ ಸಹಕಾರ ಅಗತ್ಯ. ಸಹಕಾರ ಇಲ್ಲದಿದ್ದರೆ ಗ್ರಾಮ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಒಂದು ನಗರ ಅಭಿವೃದ್ಧಿ ಹೊಂದಲು ವಿವಿಧ ಯೋಜನೆಗಳ ಮೂಲಕ ಅನುದಾನ ಅಗತ್ಯವಾಗಿದೆ. ಅದೀಗ ನಡೆಯುತ್ತಿದೆ. ವಿಟ್ಲದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ನಗರೋತ್ಥಾನ ಯೋಜನೆಯಲ್ಲಿ ಬೈಪಾಸ್ ರಸ್ತೆ ನಿರ್ಮಾಣಗೊಂಡಿದೆ. ಚರಂಡಿ, ಪಾರ್ಕಿಂಗ್ ವ್ಯವಸ್ಥೆಗಳು, ರಸ್ತೆಗಳು ನಗರ ಅಗತ್ಯವಾಗಿ ಬೇಕಾಗಿದೆ. ವಿಟ್ಲದ ವಾಹನ ದಟ್ಟಣೆ ನಿಯಂತ್ರಿಸಲು ಈ ಒಂದು ರಸ್ತೆಯಿಂದ ಸಾಧ್ಯವಿಲ್ಲ. ಇದೇ ರೀತಿಯಾಗಿ ಇನ್ನಷ್ಟು ರಸ್ತೆ ನಿರ್ಮಾಣಗೊಂಡ ಮಾತ್ರ ಸಾಧ್ಯವಾಗಿದೆ ಎಂದು ತಿಳಿಸಿದರು.
ಬಳಿಕ ಪಟ್ಟಣ ಪಂಚಾಯಿತಿನಲ್ಲಿ ಎಸ್‌ಎಫ್‌ಸಿ ೭.೨೫ರಲ್ಲಿ ಕಾಯ್ದಿರಿಸಿದ ಹಣದಲ್ಲಿ ೬೫ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿದರು. ಕಚ್ಚಾ ಮನೆ ರಿಪೇರಿಗೆ ೪೧ ಮಂದಿಗೆ ಚೆಕ್ ವಿತರಿಸಲಾಯಿತು.
ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ್ ಎಂ ವಿಟ್ಲ, ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಮುಖ್ಯಾಧಿಕಾರಿ ಮಾಲಿನಿ, ಸದಸ್ಯರಾದ ರಾಮ್‌ದಾಸ್ ಶೆಣೈ, ಲೋಕನಾಥ ಶೆಟ್ಟಿ ಕೊಲ್ಯ, ಉಷಾ ಕೃಷ್ಣಪ್ಪ, ಮಂಜುನಾಥ ಕಲ್ಲಕಟ್ಟ, ಶ್ರೀಕೃಷ್ಣ, ಬಿಜೆಪಿ ನಗರ ಅಧ್ಯಕ್ಷ ಮೋಹನದಾಸ ಉಕ್ಕುಡ, ಕಂದಾಯ ನಿರೀಕ್ಷಕ ಪಕೀರ ಮೂಲ್ಯ, ಕಾಮಗಾರಿ ಗುತ್ತಿಗೆ ವಹಿಸಿದ ಮುಗೆರೋಡಿ ಕನ್‌ಸ್ಟ್ರಕ್ಷನ್ ಸಂಸ್ಥೆಯ ಎಂಜಿನಿಯರ್ ಸಚಿನ್ ಶೆಟ್ಟಿ ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...