Monday, February 10, 2025

ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಗೆ 1008 ಕಲಶಗಳಿಂದ ಮಹಾಮಸ್ತಕಾಭಿಷೇಕ

ಉಜಿರೆ: ಕರ್ನಾಟಕ ಜೈನ ಸ್ವಯಂ ಸೇವಾ ಚಾರಿಟೇಬಲ್ ಟ್ರಸ್ಟ್ ಮತ್ತು ಸ್ವ-ಸಹಾಯ ಸಂಘಗಳ ಆಶ್ರಯದಲ್ಲಿ ಮಂಗಳವಾರ ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ 1008 ಕಲಶಗಳಿಂದ ಮಹಾಮಸ್ತಕಾಭಿಷೇಕ ನಡೆಯಿತು.
ಟ್ರಸ್ಟ್ ಸಂಚಾಲಕ ನೇಮಿರಾಜ ಆರಿಗ ನೇತೃತ್ವದಲ್ಲಿ ಕ್ರಮವಾಗಿ ಜಲಾಭಿಷೇಕ, ನಾರಿಕೇಳ, ಇಕ್ಷುರಸ (ಕಬ್ಬಿನ ಹಾಲು), ಹಾಲು, ಕಲ್ಕಚೂರ್ಣ, ಅರಿಶಿನ, ಕಷಾಯ, ಚತುಷ್ಕೋನ ಕಲಶ, ಕೇಸರಿ, ಶ್ರೀಗಂಧ, ಚಂದನ ಮತ್ತು ಅಷ್ಟ ಗಂಧದ ಅಭಿಷೇಕ ನಡೆಯಿತು.
ಶ್ರವಣಬೆಳಗೊಳದ ಸರ್ವೇಶ್ ಜೈನ್ ಮತ್ತು ಬಳಗದವರ ಸುಶ್ರಾವ್ಯ ಜಿನ ಭಕ್ತಿಗೀತೆಗಳ ಗಾಯನ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು.
ಸೌಮ್ಯ ಸರ್ವೇಶ್ ಜೈನ್, ಅಶ್ವಿನಿ, ಸಚಿನ್ ಮತ್ತು ಬಾಬಣ್ಣ ಮತ್ತೂರು ಹಿಮ್ಮೇಳದಲ್ಲಿ ಸಹಕರಿಸಿದರು. ಮೂಡಬಿದ್ರೆಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡಿದರು.
ರೆಂಜಾಳ ಗೋಪಾಲಕೃಷ್ಣ ಶೆಣೈ ಬಾಹುಬಲಿ ಮೂರ್ತಿಯನ್ನು ಸುಂದರವಾಗಿ ಕೆತ್ತನೆ ಮಾಡಿ ರಾಷ್ಟ್ರಮಟ್ಟದ ಶಿಲ್ಪಿಯಾಗಿ ಕೀರ್ತಿ ಪಡೆದಿರುತ್ತಾರೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಶಿಲ್ಪಿಯ ಮೊಮ್ಮಗ ಕಾರ್ಕಳದ ರಾಧಾಮಾಧವ ಶೆಣೈ ಅವರನ್ನು ಹೆಗ್ಗಡೆಯವರು ಸನ್ಮಾನಿಸಿದರು.
ಮೂಡಬಿದ್ರೆಯ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಉಪಸ್ಥಿತರಿದ್ದರು. ಮಸ್ತಕಾಭಿಷೇಕ ಸಂದರ್ಭದಲ್ಲಿ ಸ್ವಯಂ ಸೇವಕರ ಶಿಸ್ತುಬದ್ಧ ಸೇವೆಯನ್ನು ಹೆಗ್ಗಡೆಯವರು ಶ್ಲಾಘಿಸಿ ಅಭಿನಂದಿಸಿದರು. ಮಹಾವೀರ ಜೈನ್ ಮೂಡುಕೋಡಿ ಗುತ್ತು ಕಾರ್ಯಕ್ರಮ ನಿರ್ವಹಿಸಿದರು.

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...