Thursday, January 29, 2026

ಏಪ್ರಿಲ್ ಮೊದಲ ವಾರದಿಂದ ಪಡಿತರ ವಿತರಣೆ

ಏಪ್ರಿಲ್ ಮತ್ತು ಮೇ ತಿಂಗಳ ಪಡಿತರ ವಿತರಣೆ ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ ಎಂದು ಆಹಾರ ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.
ಮಾಹಿತಿ ಇಂತಿದೆ. ನ್ಯಾಯಬೆಲೆ ಅಂಗಡಿಯವರು ಮುಂಗಡವಾಗಿ ಪಡಿತರ ಚೀಟಿದಾರರಿಗೆ ಕರೆ ಮಾಡಿ ಒಂದು ದಿನಕ್ಕೆ ಇಂತಿಷ್ಟು ಪಡಿತರ ಚೀಟಿದಾರರನ್ನು ಕರೆಸಿ ಪಡಿತರವನ್ನು ಸುಗಮವಾಗಿ ವಿತರಿಸಬೇಕು. ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗೆ ಬರುವಾಗ ಮುಖಗವಸು ಅಥವಾ ಬಟ್ಟೆ ಧರಿಸಿರಬೇಕು. ಹಾಗೆಯೇ ಅವಶ್ಯವಾದ ಚೀಲ ಜೊತೆಗಿರಬೇಕು.
ಪ್ರತಿ ಮನೆಯಿಂದ ಒಬ್ಬ ಆರೋಗ್ಯವಂತ ವ್ಯಕ್ತಿ ಮೂಗಿಗೆ ಮಾಸ್ಕ್ / ಬಟ್ಟೆ ಧರಿಸಿಕೊಂಡು ಪಡಿತರ ಪಡೆಯಲು ಬರಬೇಕು
ಪ್ರತಿ ಮನೆಯವರು ಬರುವಾಗ ಕಡ್ಡಾಯವಾಗಿ ಕುಟುಂಬದ ಮೊಬೈಲ್‌ ತರಬೇಕು. ಇದರಿಂದ ಪಡಿತರ ವಿತರಣೆಗೆ ಸಹಕಾರಿಯಾಗಲಿದೆ. ‌ ಸಾಮಾಜಿಕ ಅಂತರ ಕನಿಷ್ಠ 1 ಮೀಟರ್ ಇರಬೇಕು.
ಏಪ್ರಿಲ್ ಹಾಗೂ ಮೇ ತಿಂಗಳ ಅಕ್ಕಿ ಮತ್ತು ಗೋಧಿ ವಿವರ ಇಂತಿದೆ.
ಬಿಪಿಎಲ್/ ಆದ್ಯತಾ ಕುಟುಂಬದ ಪ್ರತಿ ವ್ಯಕ್ತಿಗೆ ಪ್ರತಿ ತಿಂಗಳಿಗೆ 5 ಕೆ.ಜಿ ಅಕ್ಕಿ, ಕುಟುಂಬದಲ್ಲಿ 4 ಜನರು ಇದ್ದಲ್ಲಿ 20 ಕೆ.ಜಿ ಅಕ್ಕಿ ಮತ್ತು 2 ಕೆ.ಜಿ ಗೋಧಿ ವಿತರಿಸಲಾಗುತ್ತದೆ. ಎರಡು ತಿಂಗಳ ವಿತರಣೆ ಒಟ್ಟಿಗೆ ಮಾಡಬೇಕಾಗಿರುವುದರಿಂದ 40 ಕೆ.ಜಿ.ಅಕ್ಕಿ ಮತ್ತು 4 ಕೆ.ಜಿ.ಗೋಧಿಯನ್ನು ವಿತರಿಸಲಾಗುತ್ತದೆ ಎಂದು ಆಹಾರ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ಅಂತ್ಯೊದಯ ಅನ್ನ ಭಾಗ್ಯ ಯೋಜನೆ ಪಡಿತರ ಚೀಟಿದಾರರಿಗೆ ಯಾವುದೇ ಬದಲಾವಣೆಯಿಲ್ಲ. ಇವರುಗಳಿಗೆ ಗೋಧಿ ವಿತರಣೆಯಿಲ್ಲ. ಎಎವೈ ಕಾರ್ಡ್ ಗೆ ಪ್ರತಿ ಕುಟುಂಬಕ್ಕೆ 35 ಕೆ.ಜಿ. ಅಕ್ಕಿ ವಿತರಿಸಲಾಗುತ್ತದೆ. ಅದರಂತೆ ಎರಡು ತಿಂಗಳಿಗೆ ಒಟ್ಟು 70 ಕೆ.ಜಿ ಅಕ್ಕಿ ವಿತರಿಸಲಾಗುತ್ತದೆ ಎಂದು ಗೌರವ್ ಕುಮಾರ್ ಶೆಟ್ಟಿ ಅವರು ಮಾಹಿತಿ ನೀಡಿದ್ದಾರೆ.
ಪೊಲೀಸ್ ಇಲಾಖೆಯವರು ಪಡಿತರ ವಿತರಣೆ ಸುಗಮವಾಗಿ ಸಾಗಲು ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.
ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ಸ್ಯಾನಿಟೈಝೆರ್ ಅಥವಾ ಸೋಪ್ ಹಾಗೂ ನೀರನ್ನು ಕಡ್ಡಾಯವಾಗಿ ಇಟ್ಟಿರಬೇಕು ಎಂದು ಆಹಾರ ‌ಇಲಾಖೆ ಉಪ ನಿರ್ದೇಶಕರು ಸೂಚಿಸಿದ್ದಾರೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...