Saturday, January 31, 2026

ರವಿ ಪೂಜಾರಿ ವಿಚಾರಣೆಗೆ ಪೂರ್ವ ತಯಾರಿಯ ಬಗ್ಗೆ ಬಂಟ್ವಾಳ ವೃತ್ತನಿರೀಕ್ಷಕ ಟಿ.ಡಿ.ನಾಗರಾಜ್ ಮತ್ತು ಡಿ.ಸಿ.ಐ.ಬಿ.ವೃತ್ತ ನಿರೀಕ್ಷಕ ಚೆಲುವರಾಜ್ ನೇತ್ರತ್ವದ ತಂಡ ಬೆಂಗಳೂರಿಗೆ

ಬಂಟ್ವಾಳ: ಬೆಂಗಳೂರು ಸಿ.ಸಿ.ಬಿ.ಪೋಲೀಸರ ವಶದಲ್ಲಿರುವ ರವಿಪೂಜಾರಿ ಅವರ ಬಗ್ಗೆ ವಿಚಾರಣೆಯ ದೃಷ್ಟಿಯಿಂದ ಪೂರ್ವ ಮಾಹಿತಿ ಪಡೆಯಲು ಜಿಲ್ಲಾ ಪೋಲೀಸ್ ಎರಡು ತಂಡಗಳು ಬೆಂಗಳೂರಿಗೆ ತೆರಳಿದೆ.
ಈಗಾಗಲೇ ಬೆಂಗಳೂರು ಪೋಲೀಸರ ಕೈಯಲ್ಲಿ ವಿಚಾರಣೆ ನಡೆಯುತ್ತಿರುವ ರವಿ ಪೂಜಾರಿ ಅವರನ್ನು ಮಂಗಳೂರಿನ ಕೆಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಸಮಯ ತಿಳಿಯುವ ಉದ್ದೇಶದಿಂದ ಬೆಂಗಳೂರಿಗೆ ತೆರಳಿದೆ ಎಂದು ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ಪ್ರಕರಣ ಗಳು ಯಾವ ಹಂತದಲ್ಲಿ ಇದೆ, ಮತ್ತು ಬಳಿಕ ಮಂಗಳೂರಿಗೆ ವಿಚಾರಣೆಗೆ ಕರೆ ತರಲು ಅಥವಾ ಬೆಂಗಳೂರಿನಲ್ಲಿಯೆ ವಿಚಾರಿಸವುದೇ ಎಂಬ ಬಗ್ಗೆ ಸ್ಪಷ್ಟವಾದ ಚಿತ್ರ ಣಕ್ಕಾಗಿ ತೆರಳಿದೆ ಎಂಬ ಮಾಹಿತಿ ತಿಳಿದುಬಂದಿದೆ.
2010 ರಲ್ಲಿ ಕೇರಳದ ಉದ್ಯಮಿಯೋರ್ವರಿಗೆ ಬೆದರಿಕೆ ಹಾಕಿದ ಪ್ರಕರಣ ದಲ್ಲಿ ರವಿ ಪೂಜಾರಿ ಸಹಿತ 10 ಜನ ತಂಡದ ಮೇಲೆ ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ರವಿ ಪೂಜಾರಿ ಮತ್ತು ಕಲಿ ಯೋಗೀಶ್ ಎಂಬವರನ್ನು ಹೊರತುಪಡಿಸಿ ಉಳಿದಂತೆ 8 ಜನರನ್ನು ಡಿ.ಸಿ.ಐ.ಬಿ ಮಂಗಳೂರು ತಂಡ ಮತ್ತು ವಿಟ್ಲ ಪೋಲೀಸರು ಮಾಣಿಯಲ್ಲಿ ಬಂಧನ ಮಾಡಿತ್ತು. ಈ ಪ್ರಕರಣ ದ ಬಗ್ಗೆ ವಿಚಾರಣೆ ಗಾಗಿ ತೆರಳುವ ಮುನ್ನ ಅಲ್ಲಿನ ಪ್ರಕರಣ ಗಳ ವಿಚಾರಣೆಗಳು ಯಾವ ಹಂತದಲ್ಲಿ ಇದೆ ಎಂಬ ಮಾಹಿತಿ ಪಡೆಯುವ ಸಲುವಾಗಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಮತ್ತು ಮಂಗಳೂರು ಡಿ.ಸಿ.ಐ.ಬಿ.ವೃತ್ತ ನಿರೀಕ್ಷಕ ಚೆಲುವರಾಜ್ ಅವರ ನೇತ್ರತ್ವದ ಪೋಲೀಸ್ ತಂಡ ಇಂದು ಬೆಂಗಳೂರಿಗೆ ತೆರಳಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...