ಬಂಟ್ವಾಳ: ತಾಲೂಕು ರಾಯಿ ಶ್ರೀ ಮಹಾಲಿಂಗೇಶ್ವರ ಭಜನ ಮಂಡಳಿ ಇದರ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಅಹೋರಾತ್ರಿ ಭಜನ ಮಂಗಲೋತ್ಸವ ಮತ್ತು ಏಕದಶ ರುದ್ರಾಭಿಷೇಕ ಹಾಗೂ 25 ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಗುರುವಾರ ನಡೆಯಿತು.


ಬೆಳಗ್ಗೆ ಸೂರ್ಯೋದಯಕ್ಕೆ ಭಜನ ಮಂಗಲೋತ್ಸವ ಕಾರ್ಯಕ್ರಮಕ್ಕೆ ದೀಪ ಪ್ರಜ್ವಲನೆ ಮೂಲಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರ.ಅರ್ಚಕ ರಾಮಚಂದ್ರ ಭಟ್ ಮತ್ತು ಶ್ರೀ ಕ್ಷೇತ್ರ ಅರಳದ ಅರ್ಚಕ ಹರೀಶ್ ಭಟ್ ಅವರು ಚಾಲನೆ ನೀಡಿದರು. ಬಳಿಕ ಗಣ ಹೋಮ, ಶ್ರೀ ಸತ್ಯ ನಾರಾಯಣ ಪೂಜೆ ನಡೆಯಿತು.
ಶ್ರೀ ಮಹಾಲಿಂಗೇಶ್ವರ ಭಜನ ಮಂಡಳಿ ಅಧ್ಯಕ್ಷ ದಿನೇಶ್ ಭಟ್ ದೈಲ, ಗೌರವಾಧ್ಯಕ್ಷ ಹೇಮಚಂದ್ರ ಶೆಟ್ಟಿಗಾರ್, ಭಜನ ಮಂಡಳಿ ಸಂಚಾಲಕ ಸದಾನಂದ ಗೌಡ ಮತ್ತಾವು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ವಿವಿಧೆಡೆಯ 25 ತಂಡಗಳು ಭಜನ ಕಾರ್ಯಕ್ರಮ ನಡೆಸಿಕೊಟ್ಟರು.












