ಬಂಟ್ವಾಳ: ಬಂಟ್ವಾಳ ತಾಲೂಕು ರಾಯಿ ಶ್ರೀ ಮಹಾಲಿಂಗೇಶ್ವರ ಭಜನ ಮಂಡಳಿ ಇದರ 26ನೇವರ್ಷದ ಪ್ರಯುಕ್ತ ಮಹಾಶಿವರಾತ್ರಿ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಅಹೋರಾತ್ರಿ ಭಜನ ಮಂಗಲೋತ್ಸವ ಮತ್ತು ಶತರುದ್ರಯಾಗ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಬೆಳಗ್ಗೆ ಸೂರ್ಯೋದಯಕ್ಕೆ ಭಜನ ಮಂಗಲೋತ್ಸವ ಕಾರ್ಯಕ್ರಮಕ್ಕೆ ದೀಪ ಪ್ರಜ್ವಲನೆ ಮೂಲಕ ಶ್ರೀ ಮಹಾಲಿಂಗೇಶ್ವರ ಭಜನ ಮಂಡಳಿ ಅಧ್ಯಕ್ಷ ದಿನೇಶ್ ಭಟ್ ದೈಲ ಅವರು ಚಾಲನೆ ನೀಡಿದರು. ಬಳಿಕ ಗಣ ಹೋಮ, ಶ್ರೀ ಸತ್ಯ ನಾರಾಯಣ ಪೂಜೆ ನಡೆಯಿತು.
ಭಜನ ಮಂಡಳಿ ಗೌರವಾಧ್ಯಕ್ಷ ಹೇಮಚಂದ್ರ ಶೆಟ್ಟಿಗಾರ್, ದೇವಸ್ಥಾನದ ಪ್ರ.ಅರ್ಚಕ ರಾಮಚಂದ್ರ ಭಟ್ ದೈಲ, ಭಜನ ಮಂಡಳಿ ಸಂಚಾಲಕ ಸದಾನಂದ ಗೌಡ ಮತ್ತಾವು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ವಿವಿಧೆಡೆಯ 25 ತಂಡಗಳು ಭಜನ ಕಾರ್ಯಕ್ರಮ ನಡೆಸಿಕೊಟ್ಟರು.