Wednesday, July 9, 2025

ರೋಟರಿ ಟೌನ್ ವತಿಯಿಂದ ಅಂತರಾಷ್ಟ್ರೀಯ ರೆಡ್ ಕ್ರಾಸ್ ದಿನಾಚರಣೆ

ಬಂಟ್ವಾಳ : ಮಾನವೀಯತೆಯಿಂದ ಶಾಂತಿಯ ಕಡೆಗೆ ಆದರ್ಶ ಸಾರುತ್ತಿರುವ  ರೆಡ್ ಕ್ರಾಸ್ ಸಂಸ್ಥೆ ವಿಶ್ವ ಮಾನ್ಯವಾಗಿದೆ ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷರಾದ ಉಮೇಶ್ ನಿರ್ಮಲ್ ಹೇಳಿದರು.
       ಅವರು ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಯ ಅಂಗವಾಗಿ ರೋಟರಿ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದರು . ನೊಂದವರ, ದುರ್ಬಲರ , ರೋಗಿಗಳ, ಶೋಷಿತರ, ಪ್ರಾಕೃತಿಕ ವಿಕೋಪಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಕರ ಸೇವೆಗೆ ಸಮರ್ಪಣೆ ಮಾಡಿದ ಮೇ ತಿಂಗಳ 8 ನೇ ತಾರೀಖು ಮಹತ್ವ ಪಡೆದಿದೆ ಎಂದರು.
  ವಿಶ್ವದಲ್ಲಿ ಅತೀ ಹೆಚ್ಚು ಜೀವ ಹಾನಿ ಮಾಡುವಲ್ಲಿ ಯುದ್ಧಗಳು ಕಾರಣವಾಗಿವೆ. 1863 ರಿಂದ  ಸ್ಥಾಪಕರಾದ ಹೆನ್ರಿ ಡ್ಯುನಾಂಟ್ ಆಶಯವನ್ನು ರಕ್ತ ಸಂಗ್ರಹಣ ಸೇವೆ ಮೂಲಕ  ಆರಂಭಿಸಿ ಜನಮಣ್ಣನೆ ಗಳಿಸಿದೆ.  ರೆಡ್ ಕ್ರಾಸ್ ಸಂಸ್ಥೆ ವಿಶ್ವ ದಾದ್ಯಂತ ನಿಷ್ಪಕ್ಷಪಾತ ಮತ್ತು ಏಕತೆಯಿಂದ ಸ್ವಯಂಸೇವಕರ ಮಾನವೀಯತೆಯ ತಳಹದಿಯ  ಆಧಾರದ ಮೇಲೆ ಕೆಲಸ ಮಾಡುತ್ತದೆ. ರೋಟರಿ ಸಹಭಾಗಿತ್ವ ದಲ್ಲಿ ಇಂತಹ ಭಾವನೆಗಳಿಗೆ ಧ್ವನಿ ನೀಡುವ ಕೆಲಸ ನಿರಂತರವಾಗಿರಲಿ ಎಂದರು. ಸಮಾರಂಭದಲ್ಲಿ ದಿನದ ಅದೃಷ್ಟವಂತ ಸದಸ್ಯರಾದ ಸುರೇಶ್ ಸಾಲ್ಯಾನ್ ರನ್ನು ಗೌರವಿಸಲಾಯಿತು. ಕಾರ್ಯದರ್ಶಿ ಜಯರಾಜ್ ಬಂಗೇರ ಉಪಸ್ತಿತರಿದ್ದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...