ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದಲ್ಲಿ ಗಣರಾಜ್ಯೋತ್ಸವದ ನಿಮಿತ್ತ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯಾರ್ಥಿಗಳಿಂದ ಪಥಸಂಚಲ ನಡೆಯುತು. ಪದವಿ ಪೂರ್ವ ವಿದ್ಯಾಲಯದ ಅಭಿವೃದ್ದಿ ಸಮಿತಿ ಅಧ್ಯಕ್ಷ ಸದಾಶಿವ ಬರಿಮಾರು ಧ್ವಜವನ್ನು ಮೇಲಕ್ಕೆ ಎತ್ತುವ ಮೂಲಕ ಚಾಲನೆ ನೀಡಿದರು. ಪಥಸಂಚಲನ ಮುಗಿದ ಬಳಿಕ ಎಲ್ಲಾ ವಿದ್ಯಾರ್ಥಿಗಳು ವಿದ್ಯಾಕೇಂದ್ರದದಲ್ಲಿ ಒಟ್ಟಾಗಿ ಸೇರಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪದವಿ ವಿದ್ಯಾಲಯದ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾಗೇಶ್ ಇರಾ ಅವರು ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಅಧ್ಯಕ್ಷ ಬಿ. ನಾರಾಯಣ ಸೋಮಯಾಜಿ, ಸಹಸಂಚಾಲಕ ರಮೇಶ್ ಎನ್. ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರುಗಳು ಶಿಕ್ಷಕರು ಶಿಕ್ಷಕೇತರರು ಉಪಸ್ಥಿತರಿದ್ದರು.

