ವೀರಕಂಬ: ಮಜಿ ದ.ಕ. ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ರಾಷ್ಟ್ರೀಯ ಸ್ವಚ್ಚತಾ ದಿನವನ್ನಾಗಿ ಆಚರಿಸಲಾಯಿತು.
ಮಕ್ಕಳಿಗೆ ಸ್ವಚ್ಚತೆಯ ಬಗ್ಗೆ ಪ್ರತಿಜ್ಞಾ ವಿಧಿ ಭೋಧಿಸಲಾಯಿತು. ನಂತರ ಕೈ ತೊಳೆಯುವ ಸರಿಯಾದ ವಿಧಾನವನ್ನು ವಿವರಿಸಿ, ಪ್ರಾತ್ಯಕ್ಷಿಕೆ ನೀಡಲಾಯಿತು. ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಎಸ್. ಕೆ. ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು

