Thursday, January 29, 2026

ಗೋಡೌನ್ ನಿಂದ ಪಡಿತರ ಅಕ್ಕಿ ಕಳವು : ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬಂಟ್ವಾಳ: ಬಡವರಿಗೆ ಸರಕಾರ ನೀಡುವ ಪಡಿತರ ಅಕ್ಕಿಯನ್ನು ಗೋಡೌನ್ ನಿಂದ ಕಳವು ಮಾಡಲಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಂಟ್ವಾಳ ‌ನಗರ ಪೋಲೀಸ್ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ನೇತ್ರತ್ವದ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಿಜಯ್ ಕೈಕುಂಜೆ ಮತ್ತು ರಝಾಕ್ ಕುಕ್ಕಾಜೆ ಅವರನ್ನು ಪೋಲೀಸರು ಬಂಧಿಸಲಾಗಿದ್ದು, ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ.

ಕಳೆದ ಏಳು ತಿಂಗಳ ಹಿಂದೆ ಬಂಟ್ವಾಳದ ತಲಾಪಡಿ ಎಂಬಲ್ಲಿರುವ ಗೋಡೌನಲ್ಲಿ ಇರಿಸಲಾಗಿದ್ದ, ಕೋಟ್ಯಾಂತರ ರೂ ಮೌಲ್ಯದ ಪಡಿತರ ಅಕ್ಕಿಯನ್ನು ಕಳ್ಳತನ ಮಾಡಲಾಗಿದೆ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಆದರೆ ಈ ಬಗ್ಗೆ ಜಿಲ್ಲಾಧಿಕಾರಿ, ಪೋಲೀಸ್ ವರಿಷ್ಠಾಧಿಕಾರಿ ಮತ್ತು ರಾಜ್ಯ ಮಟ್ಟದ ಅನೇಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ಕುರಿತು ತನಿಖೆ ನಡೆಸಿ ಸ್ಪಷ್ಟವಾದ ಮಾಹಿತಿ ನೀಡುವಂತೆ ಭರವಸೆ ನೀಡಿದ್ದರು.

ಅದಾಗಿ ಕೆಲವು ತಿಂಗಳು ಕಳೆದರೂ ಪ್ರಕರಣದ ಬಗ್ಗೆ ಯಾವುದೇ ಸ್ಪಷ್ಟವಾದ ಮಾಹಿತಿ ಮತ್ತು ಕಾನೂನು ಪ್ರಕಾರ ಶಿಕ್ಷೆ ಆಗಿಲ್ಲ ಎಂದು ಜಿ‌.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ತಹಶಿಲ್ದಾರ್ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಜೊತೆಗೆ ಶೀಘ್ರವಾಗಿ ಪ್ರಮುಖ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಒತ್ತಾಯ ಮಾಡಿದ್ದರು.

ಆದರೆ ತಿಂಗಳು ಕಳೆದರೂ ಆರೋಪಿಗಳ ಬಂಧನವಾಗಿಲ್ಲ, ಭರವಸೆ ನೀಡಿದ್ದ ತಾಲೂಕು ತಹಶಿಲ್ದಾರ್ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಮತ್ತೆ ತುಂಗಪ್ಪ ಬಂಗೇರ ಅವರು ಪೋಲೀಸ್ ಠಾಣೆಯ ಮೆಟ್ಟಿಲು ಹತ್ತಿ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ರಮದಲ್ಲಿ ಕಪ್ಪು ಪತಾಕೆ ಹಿಡಿಯುತ್ತೇವೆ ಎಂದು ತಿಳಿಸಿದ್ದರು.

ಇದೀಗ ಬಂಟ್ವಾಳ ಪೋಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣದ ಬಗ್ಗೆ ಇನ್ನಷ್ಟು ಮಾಹಿತಿ ಕಲೆಹಾಕುತ್ತಿದ್ದು, ಇನ್ನಷ್ಟು ಆರೋಪಿಗಳು ಹಾಗೂ ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆ ಗಳಿವೆ ಎಂದು ಹೇಳಲಾಗಿದೆ.

ಅಭಿನಂದನೆ : ಎಂ.ತುಂಗಪ್ಪ ಬಂಗೇರ

ಆರೋಪಿಗಳನ್ನು ಬಂಧಿಸಿದ ಪೋಲೀಸರ ಕಾರ್ಯವನ್ನು ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅಭಿನಂದಿಸಿದ್ದಾರೆ.

ಈ ಪ್ರಕರಣದ ಎಲ್ಲಾ ಆರೋಪಿಗಳನ್ನು ಪೋಲೀಸರು ಬಂಧಿಸುವ ಭರವಸೆ ಇದೆ.

ಈಗಾಗಲೇ ಬಂಧಿಸಿದ ಆರೋಪಿ ಕಾಂಗ್ರೆಸ್ ನಾಯಕರೋರ್ವರ ಜೊತೆ ಗುರುತಿಸಿಕೊಂಡಿದ್ದಾನೆ ಎಂದು ಅವರು ಆರೋಪ ಮಾಡಿದ್ದಲ್ಲದೆ, ಘಟನೆಯ ತನಿಖೆ ಗೆ ಸರಕಾರ ಸಹಕಾರ ನೀಡದೆ ನೈಜ ಆರೋಪಿಗಳ ಬಂಧನಕ್ಕೆ ಮೀನಮೇಷ ಎಣಿಸುವ ಕಾರ್ಯಕ್ಕೆ ಗರಂ ಆದ ಬಂಗೇರ ಅವರು ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

More from the blog

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...